ನವದೆಹಲಿ : ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಕಿಡಿಕಾರಿದ್ದು, ಮಮತಾ ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅವಧಿ ಮೀರಿದ ಪ್ರಧಾನಿ ಅವರೊಂದಿಗೆ ಮಾತುಕತೆ ನಡೆಸಲು ನಾನು ಬಯಸುವುದಿಲ್ಲ ಎಂದು ಮಮತಾ ಬ್ಯಾನರ್ಜಿಯವರು ಚಂಡಮಾರುತಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಹೇಳಿದ್ದರು.
ಈ ಬಗ್ಗೆ ಮಮತಾ ಅವರಿಗೆ ಟ್ವಿಟರ್ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸುಷ್ಮಾ, “ಮಮತಾ ಅವರೇ ನೀವು ಎಲ್ಲಾ ಮಿತಿಗಳನ್ನು ಮೀರಿದ್ದೀರಿ. ನೀವು ಒಂದು ರಾಜ್ಯದ ಮುಖ್ಯಮಂತ್ರಿ ಮತ್ತು ಮೋದಿ ಅವರು ದೇಶದ ಪ್ರಧಾನಿ. ನಾಳೆ ನೀವು ಅವರೊಂದಿಗೆ ಮಾತನಾಡಲೇಬೇಕು. ಈ ಮಾತನ್ನು ಬಶೀರ್ ಬದ್ರ್ ಅವರ ದುಷ್ಮನಿ ಕಮ್ ಕರೋ ಲೇಕಿನ್ ಗುಂಜಾಯಿಸ್ ರಹೆ ಎಂಬ ಮಾತಿನ ಮೂಲಕ ನಿಮಗೆ ನೆನಪಿಸಲು ಬಯಸುತ್ತೇನೆ” ಎಂದಿದ್ದಾರೆ.
ಫನಿ ಚಂಡಮಾರುತಕ್ಕೆ ಸಂಬಂಧಿಸಿದಂತೆ ವಿವರ ಪಡೆಯಲು ಮಮತಾ ಬ್ಯಾನರ್ಜಿಯವರಿಗೆ ಪ್ರಧಾನಿಯವರು ಕರೆ ಮಾಡಿದ್ದಾರೆ. ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ಮಮತಾ ಬ್ಯಾನರ್ಜಿ ನೀಡಿಲ್ಲ. ಇದಕ್ಕೆ ಸ್ಪಷ್ಟನೆ ನೀಡಿರುವ ಮಮತಾ, ಮೋದಿ ಅವಧಿ ಮೀರಿದ ಪ್ರಧಾನಿ, ಅವರೊಂದಿಗೆ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.
ಅವರ ಈ ಮಾತಿಗೆ ಭಾರೀ ಖಂಡನೆಗಳು ವ್ಯಕ್ತವಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.