ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರನ್ನು ಅವಮಾನಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ರಾಜೀವ್ ಗಾಂಧಿಯ ಅವಮಾನದ ಮೂಲಕ ಬೆಲೆ ತೆರುತ್ತಿದ್ದಾರೆ ಎಂದು ಶಿವಸೇನೆ ಹೇಳಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಾಡಿದ ಭ್ರಷ್ಟಾಚಾರಗಳ ಬಗ್ಗೆ ಚುನಾವಣಾ ಸಮಾವೇಶಗಳಲ್ಲಿ ಹೇಳುತ್ತಾ ಬರುತ್ತಿರುವ ಹಿನ್ನಲೆಯಲ್ಲಿ ಶಿವಸೇನೆ ಈ ಪ್ರತಿಕ್ರಿಯೆಯನ್ನು ನೀಡಿದೆ.
“ರಾಹುಲ್ ಗಾಂಧಿಯವರು ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಿಯವರನ್ನು ಛೋರ್ ಎನ್ನುತ್ತಿದ್ದಾರೆ. ಈ ರೀತಿ ಹೇಳುವ ರಾಹುಲ್ ಅವರನ್ನು ಕರೆದು ಮೋದಿ ಚಹಾ ನೀಡಬೇಕು ಎಂದು ನಿರೀಕ್ಷೆ ಮಾಡುವುದು ಸಾಧ್ಯವೇ?, ಮೋದಿ ರಾಜೀವ್ ಗಾಂಧಿ ಬಗ್ಗೆ ಹೇಳಿದ್ದು ತಪ್ಪು ಎಂದೇ ಇಟ್ಟುಕೊಳ್ಳೋಣ, ಹಾಗಾದರೆ ವೀರ ಸಾವರ್ಕರ್ ಅವರ ಬಗ್ಗೆ ರಾಹುಲ್ ಹೇಳಿದ್ದು ಕೆಟ್ಟದಲ್ಲವೇ?” ಎಂದು ಶಿವಸೇನೆ ಪ್ರಶ್ನಿಸಿದೆ.
“ಸಾವರ್ಕರ್ ಅವರನ್ನು ರಾಹುಲ್ ಅವಮಾನಿಸಿದ ರೀತಿ, ಅವರಾಗೆ ಬ್ರಿಟಿಷ್ ಜೈಲಿನಿಂದ ತಪ್ಪಿಸಿಕೊಂಡರು ಎಂದು ವರ್ಣಿಸಿದ ರೀತಿ ನಿಜಕ್ಕೂ ಸ್ವೀಕಾರಾರ್ಹವಲ್ಲ. ಅದು ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸಿದಂತೆ” ಎಂದಿದೆ.
ಇತ್ತೀಚಿಗೆ ರಾಜೀವ್ ಗಾಂಧಿ ಅವರನ್ನು ಮೋದಿ “ಭ್ರಷ್ಟಾಚಾರಿ ನಂ.1” ಎಂದು ಹೇಳಿದ್ದರು. ಇದು ಕಾಂಗ್ರೆಸ್ ಪಾಳಯದ ಕಣ್ಣು ಕೆಂಪಾಗುವಂತೆ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.