ನವದೆಹಲಿ: ಪಾಕಿಸ್ಥಾನದ ಬಾಲಕೋಟ್ನಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ 170 ಉಗ್ರರು ಹತರಾಗಿದ್ದಾರೆ ಎಂಬುದಾಗಿ ಇಟಲಿ ಪತ್ರಕರ್ತೆಯೊಬ್ಬರು ಹೇಳಿದ್ದಾರೆ. ಅಪಾರ ಪ್ರಮಾಣದ ಉಗ್ರರಿಗೆ ಗಾಯಗಳಾಗಿದ್ದು, ಅವರಿಗೆ ಈಗಲೂ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಇವರು ತಿಳಿಸಿದ್ದಾರೆ. ಪಾಕಿಸ್ಥಾನದಲ್ಲಿನ ತನ್ನ ಸುದ್ದಿ ಮೂಲಗಳಿಗೆ ಅಪಾಯ ಬರಬಹುದು ಎಂಬ ಆತಂಕದಿಂದ ಸುದ್ದಿಯನ್ನು ತಡವಾಗಿ ಬಿತ್ತರ ಮಾಡುತ್ತಿರುವುದಾಗಿ ಈಕೆ ಹೇಳಿಕೊಂಡಿದ್ದಾರೆ.
ಫ್ರಾನ್ಸಿಸೋ ಮ್ಯಾರಿನೋ ಎಂಬ ಪತ್ರಕರ್ತೆ ಈ ವಿಷಯವನ್ನು ತಿಳಿಸಿದ್ದು, ಭಾರತ ನಡೆಸಿದ ದಾಳಿಯಲ್ಲಿ ಉಗ್ರರು ಸತ್ತಿದ್ದಾರೆ ಎಂಬ ವಿಷಯವನ್ನು ಹೊರ ಜಗತ್ತಿಗೆ ತಿಳಿಯದಂತೆ ಮಾಡಲು ಪಾಕಿಸ್ಥಾನದ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸಿದೆ. ಬೆದರಿಕೆಗಳನ್ನು ಹಾಕಿ, ಅಪಾರ ಪ್ರಮಾಣದ ಲಂಚಗಳನ್ನು ನೀಡಿದೆ ಎಂದು ಅವರು ಹೇಳಿದ್ದಾರೆ.
ವೈಮಾನಿಕ ದಾಳಿಯಲ್ಲಿ ಗಾಯಗೊಂಡ ಹಲವಾರು ಜೈಶೇ ಇ ಮೊಹಮ್ಮದ್ ಸಂಘಟನೆಯ ಉಗ್ರರಿಗೆ ಮಿಲಿಟರಿ ವೈದ್ಯರಿಂದ ಈಗಲೂ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದರೆ ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿಲ್ಲ ಎಂದಿದ್ದಾರೆ.
ಪುಲ್ವಾಮ ದಾಳಿಗೆ ಪ್ರತಿಕಾರವಾಗಿ ಭಾರತ ಬಾಲಕೋಟ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿತ್ತು. ಆದರೆ ಈ ದಾಳಿಯಲ್ಲಿ ಎಷ್ಟು ಮಂದಿ ಸತ್ತಿದ್ದಾರೆ ಎಂಬ ಬಗ್ಗೆ ಇದುವರೆಗೆ ನಿಖರ ಮಾಹಿತಿ ಸಿಕ್ಕಿಲ್ಲ. ಸರ್ಕಾರದ ಮಾಹಿತಿಯ ಪ್ರಕಾರ ಸುಮಾರು 300 ಉಗ್ರರು ಸತ್ತಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರತಿಪಕ್ಷಗಳು ಇದಕ್ಕೆ ಸಾಕ್ಷಿ ನೀಡುವಂತೆ ಕೇಳಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.