News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇಂದ್ರದ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಅಸಡ್ಡೆ ತೋರಿಸುತ್ತಿರುವ ಕರ್ನಾಟಕ ಸರ್ಕಾರ

ಬೆಂಗಳೂರು: ಕರ್ನಾಟಕದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಸಮರ್ಥತೆಯ ಟ್ರೇಡ್­ಮಾರ್ಕ್ ಆಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, ಸ್ಮಾರ್ಟ್ ಸಿಟಿ ಯೋಜನೆಯ ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯಸರ್ಕಾರ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿದೆ. ಅಧಿಕೃತ ದಾಖಲೆಯ ಪ್ರಕಾರ, ಸ್ಮಾರ್ಟ್ ಸಿಟಿ ಯೋಜನೆಗೆ ನೀಡಲಾದ ಅನುದಾನದಲ್ಲಿ ಕರ್ನಾಟಕ ಶೇ.1ಕ್ಕಿಂತಲೂ ಕಡಿಮೆ ಅನುದಾನವನ್ನು ಬಳಕೆ ಮಾಡಿಕೊಂಡಿದೆ, ಬೆಂಗಳೂರು ಮತ್ತು ಮಂಗಳೂರು ಈ ಯೋಜನೆಯಡಿ ಒಂದೇ ಒಂದು ಯೋಜನೆಯನ್ನು ಪೂರ್ಣಗೊಳಿಸಿಲ್ಲ. ಸರ್ಕಾರ ಯೋಜನೆ ಅನುಷ್ಠಾನದಲ್ಲಿ ಯಾವುದೇ ಆಸಕ್ತಿಯನ್ನೂ ತೋರಿಸುತ್ತಿಲ್ಲ.

ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಮಂಗಳೂರು ಮತ್ತು ತುಮಕೂರು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾದ ನಗರಗಳು. ಈ ನಗರಗಳು ತಲಾ ರೂ. 500 ಕೋಟಿಯನ್ನು ಕೇಂದ್ರ ಮತ್ತು ರಾಜ್ಯದಿಂದ ಪಡೆದುಕೊಳ್ಳಲಿವೆ. ಇದುವರೆಗೆ ರೂ. 6,462 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ, ಆದರೆ, ನಗರಾಭಿವೃದ್ಧಿ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರ ಕೇವಲ ರೂ. 30.97 ಕೋಟಿಯನ್ನು ಮಾತ್ರ ಬಳಸಿಕೊಂಡಿದೆ. ಉಳಿದ ಯೋಜನೆಗಳ ಪೈಕಿ ಕೆಲವು ಯೋಜನೆಗಳ ಕಾಮಗಾರಿ ನಡೆಯುತ್ತಿದೆ, ಕೆಲವೊಂದಕ್ಕೆ ಟೆಂಡರ್ ನೀಡಲಾಗಿದೆ ಮತ್ತು ಕೆಲವೊಂದು ಇನ್ನೂ ಪ್ರಕ್ರಿಯೆಯನ್ನು ಆರಂಭಿಸಬೇಕಿದೆ.

ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಪಾರ್ಕ್ ನಿರ್ಮಾಣವಾಗಿದೆ. ಆದರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಪಾರ್ಕ್ ನಿರ್ಮಾಣದ ಅಗತ್ಯವಿದೆಯೇ? ಪಬ್ಲಿಕ್ ವರ್ಕ್ಸ್ ಡಿಪಾರ್ಟ್­ಮೆಂಟ್ ಮಾಡುವ ಕಾರ್ಯವನ್ನು ಮಾಡುವುದಕ್ಕೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಬಳಸಿಕೊಳ್ಳಲಾಗುತ್ತದೆ.

2015ರಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಆರಂಭವಾಯಿತು, 2016ರಲ್ಲಿ ಕರ್ನಾಟಕ ಆಯ್ಕೆಯಾಯಿತು. 2017ರಲ್ಲಿ ಬೆಂಗಳೂರು ಸೇರ್ಪಡೆಗೊಂಡಿತ್ತು. ಆದರೆ ಹಿಂದಿನ ಸಿದ್ದರಾಮಯ್ಯ ಸರ್ಕಾರವಾಗಲಿ, ಈಗಿನ ಕುಮಾರಸ್ವಾಮಿ ಸರ್ಕಾರವಾಗಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಏನನ್ನೂ ಮಾಡಿಲ್ಲ. ಹೀಗಾಗಿ ಯೋಜನೆಯ ಫಲ ಜನರಿಗೆ ಇನ್ನೂ ಸಿಕ್ಕಿಲ್ಲ. ಇನ್ನು ಮುಂದಾದರೂ ಈ ನಿಟ್ಟಿನಲ್ಲಿ ಸರ್ಕಾರ ಎಚ್ಚೆತ್ತುಕೊಳ್ಳಬಹುದಾ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top