ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಹಾರ ಪ್ರಕ್ರಿಯೆಯನ್ನು ಭದ್ರತಾ ಪಡೆಗಳು ನಿರಂತರಗೊಳಿಸಿವೆ. ಅದರಲ್ಲೂ ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ನಡೆದ ಬಳಿಕ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ಅತ್ಯಂತ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಮಂಗಳವಾರ ಮುಂಜಾನೆ ಕೂಡ ಶೋಪಿಯಾನ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಉಗ್ರರು ಅವಿತುಕೊಂಡಿರುವ ಖಚಿತ ಮಾಹಿತಿಯ ಬೆನ್ನತ್ತಿದ ಭದ್ರತಾ ಪಡೆಗಳು, ಶೋಪಿಯಾನದ ಅವನೀರ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಿದವು. ಈ ವೇಳೆ ಹಲವು ಮಂದಿ ಉಗ್ರರು ಅವಿತುಕೊಂಡಿದ್ದ ಸ್ಥಳದಿಂದಲೇ ಗುಂಡಿನ ದಾಳಿಯನ್ನು ನಡೆಸಲಾರಂಭಿಸಿದರು. ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ನೀಡಿದ ಯೋಧರು ಇಬ್ಬರನ್ನು ಹತ್ಯೆ ಮಾಡಿದ್ದಾರೆ.
ಮೃತ ಉಗ್ರರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಇವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ವಸಪಡಿಸಿಕೊಳ್ಳಲಾಗಿದೆ.
ಈ ಪ್ರದೇಶದಲ್ಲಿ ಉಗ್ರರು ಸ್ಪೋಟಕಗಳನ್ನು ಇಟ್ಟಿರುವ ಸಾಧ್ಯತೆಗಳು ಇರುವುದರಿಂದ ಯಾರೂ ಓಡಾಡದಂತೆ ಭದ್ರತಾ ಪಡೆಗಳು ಎಚ್ಚರಿಕೆಯನ್ನು ರವಾನಿಸಿವೆ.
ಪಾಕಿಸ್ಥಾನ ಬೆಂಬಲಿತ ಉಗ್ರರು ಕಣಿವೆ ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸಲು ನಿರಂತರವಾಗಿ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಇತ್ತೀಚಿನ ಗುಪ್ತಚರ ವರದಿಯ ಪ್ರಕಾರ, ಅಲ್ ಖೈದಾ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದಲ್ಲಿನ ಭಾರತೀಯ ಭದ್ರತಾ ಅಳವಡಿಕೆಗಳ ಮೇಲೆ ದಾಳಿ ನಡೆಸಲು ಸಂಚನ್ನು ರೂಪಿಸಿದ್ದು, ಇದಕ್ಕೆ ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಯ ಬೆಂಬಲವನ್ನು ಪಡೆದುಕೊಂಡಿದೆ. ಹೀಗಾಗಿ ಭದ್ರತಾ ಪಡೆಗಳು ಹೈ ಅಲರ್ಟ್ನಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.