ಕೋಲ್ಕತ್ತಾ: ಪಶ್ಚಿಮಬಂಗಾಳ ಈಗ ಅಕ್ಷರಶಃ ಹಿಂಸೆಯ ರಾಜ್ಯವಾಗಿ ಪರಿವರ್ತನೆಗೊಂಡಿದೆ. ಅಲ್ಲಿನ ರಾಜಕೀಯ ಹಿಂಸಾಚಾರ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಲೇ ಇದೆ. ಜೈಶ್ರೀರಾಮ್ ಸಮಾವೇಶವನ್ನು ಆಯೋಜಿಸಿದ ತರುವಾಯ ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಮೃತದೇಹ ಮರದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗುತ್ತಿವೆ.
ಸೋಮವಾರ ಸಮತುಲ್ ದೊಲುಯಿ ಎಂಬ ಬಿಜೆಪಿ ಕಾರ್ಯಕರ್ತನ ಮೃತದೇಹ ಹೌರಾ ಜಿಲ್ಲೆಯ ಸರ್ಪೋತ ಗ್ರಾಮದ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೈಶ್ರೀರಾಮ್ ಸಮಾವೇಶದಲ್ಲಿ ಭಾಗಿಯಾದ ಬಳಿಕ ಈತನಿಗೆ ಮೇಲಿಂದ ಮೇಲೆ ಬೆದರಿಕೆ ಕರೆಗಳು ಬರುತ್ತಿದ್ದವು. ಮಾತ್ರವಲ್ಲ, ಮೇ.23ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬಳಿಕ ಈತನ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ದರೋಡೆಯನ್ನೂ ಮಾಡಿದ್ದರು ಎಂದು ಹೇಳಲಾಗಿದೆ.
ಇಷ್ಟು ಮಾತ್ರವಲ್ಲ, ಮರಣೋತ್ತರ ಪರೀಕ್ಷೆಗೆ ಈತನ ಮೃತದೇಹವನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆಯೂ ಮೃತದೇಹವನ್ನು ಕದಿಯುವ ಪ್ರಯತ್ನವನ್ನೂ ಮಾಡಲಾಗಿತ್ತು.
ಭಾನುವಾರ ಆರ್ಎಸ್ಎಸ್ ಕಾರ್ಯಕರ್ತ ಸ್ವದೇಶ್ ಮನ್ನಾ ಎಂಬುವವರು ಕೂಡ ಇದೇ ಮಾದರಿಯಲ್ಲಿ ಹತ್ಯೆಯಾಗಿದ್ದರು. ಜೈಶ್ರೀರಾಮ್ ಸಮಾವೇಶದಲ್ಲಿ ಭಾಗಿಯಾಗಿದ್ದ ಇವರನ್ನು ಅಚತ ಗ್ರಾಮದಲ್ಲಿ ಕೊಲೆ ಮಾಡಿ ಮೃತದೇಹವನ್ನು ಮರಕ್ಕೆ ಕಟ್ಟಲಾಗಿತ್ತು.
ಈ ಎಲ್ಲಾ ಕೊಲೆಗಳ ಹಿಂದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನೇರ ಕೈವಾಡವಿದೆ ಎಂದು ಬಿಜೆಪಿ ಗಂಭೀರ ಆರೋಪವನ್ನು ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.