ನವದೆಹಲಿ: ಮುಂದಿನ ತಿಂಗಳಿನಿಂದ ದೇಶದಾದ್ಯಂತ ಮದರಸ ಶಿಕ್ಷಕರಿಗೆ ವಿವಿಧ ಶೈಕ್ಷಣಿಕ ಸಂಸ್ಥೆಗಳಡಿಯಲ್ಲಿ ಮುಖ್ಯವಾಹಿನಿಯ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆಯೋಜನೆಗೊಳಿಸುತ್ತಿದೆ ಎಂಬುದಾಗಿ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಅಲ್ಲದೇ ಮುಂದಿನ ಐದು ವರ್ಷಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಸುಮಾರು 5 ಕೋಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಮುಗಿದ ಬಳಿಕ, ಮೆಟ್ರಿಕ್ ಪೂರ್ವ ಮತ್ತು ಮೆರಿಟ್ ಕಮ್ ಮೀನ್ಸ್ ಸ್ಕಾಲರ್ಶಿಪ್ ಗಳನ್ನು ನೀಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಮೋದಿ ಸರ್ಕಾರವು ಕೋಮುವಾದದ ಅನಿಷ್ಟ ಮತ್ತು ಓಲೈಕೆಯ ರಾಜಕಾರಣವನ್ನು ತೊಡೆದು ಹಾಕಿ ಎಲ್ಲರನ್ನೂ ಒಳಗೊಂಡ ಆರೋಗ್ಯಪೂರ್ಣ ವಾತಾವರಣವನ್ನು ಸೃಷ್ಟಿಸಿದೆ ಹಾಗೂ ಸ್ವತಂತ್ರ, ನ್ಯಾಯ ಸಮ್ಮತ ಮತ್ತು ಏಕತೆಯ ಸರ್ಕಾರವನ್ನು ನೀಡಿದೆ ಎಂದು ಅವರು ಹೇಳಿದ್ದಾರೆ.
ಮಾತ್ರವಲ್ಲದೇ, ಶಾಲೆಯನ್ನು ತೊರೆದ ಮುಸ್ಲಿಂ ಹೆಣ್ಣು ಮಕ್ಕಳನ್ನು ಮತ್ತೆ ಶಿಕ್ಷಣಕ್ಕೆ ಮರಳುವಂತೆ ಮಾಡಲು ಸರ್ಕಾರ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೂಲಕ ‘ಬ್ರಿಡ್ಜ್ ಕೋರ್ಸ್’ಗಳನ್ನು ದೇಶವ್ಯಾಪಿಯಾಗಿ ಆರಂಭಿಸಲಿದೆ, ಅದರ ಮೂಲಕ ಉದ್ಯೋಗವನ್ನು ನೀಡಲಿದೆ ಎಂದಿದ್ದಾರೆ.
ಮದರಸಗಳ ಶಿಕ್ಷಕರಿಗೆ ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಕಂಪ್ಯೂಟರ್ ಮುಂತಾದ ವಿಷಯಗಳ ಬಗ್ಗೆ ಶಿಕ್ಷಣ ಸಂಸ್ಥೆಗಳಿಂದ ತರಬೇತಿಯನ್ನು ನೀಡಲಾಗುವುದು, ಈ ಮದರಸ ಕಾರ್ಯಕ್ರಮ ಮುಂದಿನ ತಿಂಗಳಿನಿಂದಲೇ ಆರಂಭವಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.