ಲಕ್ನೋ: ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಅಪರಾಧಿಗಳು ಸ್ವತಂತ್ರವಾಗಿ ಓಡಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಅವರಿಗೆ ಯುಪಿ ಪೊಲೀಸರು ಅಂಕಿ-ಅಂಶ ಸಹಿತ ತಿರುಗೇಟು ನೀಡಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಇಳಿಮುಖವಾಗುತ್ತಿದೆ ಎಂಬ ಮಾಹಿತಿಯನ್ನು ಟ್ವೀಟ್ ಮಾಡಿದ್ದಾರೆ.
गम्भीर अपराधों में यूपी पुलिस द्वारा अपराधियों के विरुद्ध कठोर कार्यवाही की गयी है
2 वर्षों में 9225 अपराधी गिरफ़्तार हुए और 81 मारे गये हैं |रासुका में प्रभावी कार्यवाही कर लगभग 2 अरब की सम्पत्ति ज़ब्त की गयी है
डकैती, हत्या, लूट एवं अपहरण जैसी घटनाओं में अप्रत्याशित कमी आई है https://t.co/DE9KmtRBtK— UP POLICE (@Uppolice) June 29, 2019
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಯುಪಿ ಪೊಲೀಸರು, “ಗಂಭೀರ ಪ್ರಕರಣಗಳಲ್ಲಿ ಅಪರಾಧಿಗಳಾಗಿರುವವರ ವಿರುದ್ಧ ಯುಪಿ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ಎರಡು ವರ್ಷಗಳಲ್ಲಿ 9225 ಅಪರಾಧಿಗಳನ್ನು ಬಂಧಿಸಲಾಗಿದೆ ಮತ್ತು 81 ಕ್ರಿಮಿನಲ್ಗಳನ್ನು ಹತ್ಯೆ ಮಾಡಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 2 ಬಿಲಿಯನ್ ಮೊತ್ತದ ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ. ದರೋಡೆ, ಕೊಲೆ, ಅಪಹರಣದಂತಹ ಪ್ರಕರಣಗಳಲ್ಲಿ ಭಾರೀ ಇಳಿಮುಖವಾಗುತ್ತಿದೆ” ಎಂದಿದ್ದಾರೆ.
ಈ ಟ್ವೀಟ್ ಮಾಡುವ ಮೂಲಕ ಯುಪಿ ಪೊಲೀಸರು ಪ್ರಿಯಾಂಕಾ ವಾದ್ರಾಗೆ ತಕ್ಕ ತಿರುಗೇಟನ್ನು ನೀಡಿದ್ದಾರೆ.
ಯೋಗಿ ಆದಿತ್ಯನಾಥ ಸರ್ಕಾರವು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯವನ್ನು ನೀಡಿ ಅಪರಾಧಿಗಳನ್ನು ಮಟ್ಟ ಹಾಕುವಂತೆ ಮಾಡಿದೆ. ಇದಕ್ಕಾಗಿ ಅವರ ಸರ್ಕಾರಕ್ಕೆ ಭಾರೀ ಶ್ಲಾಘನೆಗಳೂ ವ್ಯಕ್ತವಾಗುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.