ಹೈದರಾಬಾದ್: ಬ್ರಕೀದ್ ಸಂದರ್ಭದಲ್ಲಿ ಗೋವುಗಳನ್ನು ಹತ್ಯೆ ಮಾಡದಂತೆ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಅಲಿ ಅವರು ಮುಸ್ಲಿಂ ಸಮುದಾಯದವರಿಗೆ ಕರೆ ನೀಡಿದ್ದಾರೆ. ಇನ್ನೊಂದು ಸಮುದಾಯದ ಧಾರ್ಮಿಕ ಭಾವನೆಗಳನ್ನು ನಾವು ಗೌರವಿಸಬೇಕು, ಈ ಕಾರಣದಿಂದ ಗೋ ಹತ್ಯೆಯಿಂದ ದೂರ ಇರಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
“ನಾನು ಎಲ್ಲಾ ಮುಸ್ಲಿಂ ಸಹೋದರರಿಗೆ ಗೋವುಗಳನ್ನು ಬಲಿ ನೀಡುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡುತ್ತೇನೆ. ಗೋವನ್ನು ಹಿಂದು ಧರ್ಮದಲ್ಲಿ ಗೌರವಿಸಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ” ಎಂದು ಅಲಿ ಹೇಳಿದ್ದಾರೆ. ಅಲ್ಲದೇ, ಮುಸ್ಲಿಂ ಸಮುದಾಯದ ಸದಸ್ಯರು ಆಡು ಮತ್ತು ಇತರ ಸಣ್ಣ ಪ್ರಾಣಿಗಳನ್ನು ಬಲಿ ನೀಡಬಹುದು ಎಂದಿದ್ದಾರೆ.
ಈದ್ ಅಲ್-ಅಧಾ ಅಥವಾ ಬಕ್ರೀದ್ ಸಂದರ್ಭದಲ್ಲಿ ಹಸುಗಳನ್ನು ಬಲಿ ನೀಡಿದರೆ ಕಾನೂನು ತನ್ನ ಕ್ರಮವನ್ನು ಜರುಗಿಸಲಿದೆ ಎಂದು ಅವರು ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯನ್ನು ಪೊಲೀಸರು ಹೊತ್ತುಕೊಂಡಿದ್ದಾರೆ. ಅದನ್ನು ಅವರು ಅಚ್ಚುಕಟ್ಟಾಗಿಯೇ ನಿಭಾಯಿಸಲಿದ್ದಾರೆ ಎಂದಿದ್ದಾರೆ.
ಆಗಸ್ಟ್ 11ರಂದು ಬಕ್ರೀದ್ ಹಬ್ಬವಿದ್ದು, ಈ ವೇಳೆ ಪ್ರಾಣಿ ಬಲಿ ಕೊಡುವುದು ಸಾಮಾನ್ಯವಾಗಿದೆ. ಆದರೆ ಗೋವುಗಳನ್ನು ಅಕ್ರಮವಾಗಿ ಬಲಿಕೊಡದಂತೆ ತಡೆಯುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.