ಅಹ್ಮದಾಬಾದ್: ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ಗುಜರಾತಿನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್ ಮತ್ತು ಅವರ ಆಪ್ತ ಹಾಗೂ ಶಾಸಕ ಧವಲ್ ಸಿನ್ಹಾ ಝಾಲ ಅವರು ಗುರುವಾರ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಜುಲೈ 5 ರಂದು ಗುಜರಾತ್ನಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ್ದ ಅಲ್ಪೇಶ್, ಬಳಿಕ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿದ್ದರು. ಅವರು ತಮ್ಮ ಆಪ್ತ ಮತ್ತು ಶಾಸಕ ಧವಲ್ ಸಿನ್ಹಾ ಅವರೊಂದಿಗೆ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ.
ಮೂಲಗಳ ಪ್ರಕಾರ, ಗುಜರಾತ್ ಬಿಜೆಪಿ ಮುಖ್ಯಸ್ಥ ಜಿತು ವಾಘನಿ ಅವರ ಸಮ್ಮುಖದಲ್ಲಿ ಅಲ್ಪೇಶ್ ಮತ್ತು ಸಿನ್ಹಾ ಅವರನ್ನು ಕೇಸರಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.
ಠಾಕೋರ್ ನೇತೃತ್ವದ ಗುಜರಾತ್ ಕ್ಷತ್ರಿಯ ಠಾಕೋರ್ ಸೇನಾ (ಜಿಕೆಟಿಎಸ್), ಶೀಘ್ರದಲ್ಲೇ ಠಾಕೋರ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬುದನ್ನು ಇತ್ತೀಚಿಗಷ್ಟೇ ಖಚಿತಪಡಿಸಿತ್ತು.
ಪಟಾನ್ ಜಿಲ್ಲೆಯ ರಾಧನ್ಪುರದ 43 ವರ್ಷದ ಮಾಜಿ ಶಾಸಕನಾಗಿರುವ ಠಾಕೋರ್ ಅವರು, ಈ ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ 2017 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಟಿಕೆಟ್ ಪಡೆದು ಸ್ಪರ್ಧಿಸಿ ಗೆದ್ದಿದ್ದರು. ಬಳಿಕ ಅವರು ಪಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
2019 ರ ಲೋಕಸಭಾ ಚುನಾವಣೆಗೆ ಮುನ್ನ ಏಪ್ರಿಲ್ನಲ್ಲಿ ಕಾಂಗ್ರೆಸ್ನ ಎಲ್ಲ ಹುದ್ದೆಗಳಿಗೆ ಠಾಕೋರ್ ರಾಜೀನಾಮೆ ನೀಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಗುಜರಾತಿನಲ್ಲಿ ಸತತ ಎರಡನೇ ಬಾರಿಗೆ ಬಿಜೆಪಿ ಎಲ್ಲಾ 26 ಸಂಸತ್ ಸ್ಥಾನಗಳನ್ನು ಗೆದ್ದುಕೊಂಡಿದೆ.
ಠಾಕೋರ್ ಅವರ ಆಪ್ತರಾಗಿರುವ ಸಿನ್ಹಾ ಅವರು, ಸಬರ್ಕಂತ ಜಿಲ್ಲೆಯ ಬಯಾದ್ ಶಾಸಕರಾಗಿದ್ದರು. ಇತ್ತೀಚಿಷ್ಟೇ ರಾಜೀನಾಮೆ ಸಲ್ಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.