ನವದೆಹಲಿ: ಸಾರ್ವಜನಿಕ ಹಿತಾಸಕ್ತಿಯಲ್ಲಿ ಸಮಗ್ರತೆಯ ಕೊರತೆ ಮತ್ತು ಅಸಮರ್ಥತೆಯನ್ನು ಪ್ರದರ್ಶಿಸಿದ ಕಾರಣಕ್ಕಾಗಿ ಕಳೆದ ಐದು ವರ್ಷಗಳಲ್ಲಿ ಗೃಹ ಸಚಿವಾಲಯದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ 1 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವುದು ನಿರಂತರ ಪ್ರಕ್ರಿಯೆಯಾಗಿದೆ, ಅನ್ವಯವಾಗುವ ಶಿಸ್ತು ನಿಯಮಗಳ ಪ್ರಕಾರ, ಸೇವೆಯಿಂದ ವಜಾಗೊಳಿಸುವುದು ಮತ್ತು ತೆಗೆದುಹಾಕುವುದು ಸೇರಿದಂತೆ ನಿಗದಿತ ದಂಡ ವಿಧಿಸುವ ಮೂಲಕ ತಪ್ಪು ಹಾದಿ ಹಿಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ ಎಂದು ರಾಯ್ ಪ್ರತಿಪಾದಿಸಿದ್ದಾರೆ.
“ಕಳೆದ ಐದು ವರ್ಷಗಳಲ್ಲಿ ಸಚಿವಾಲಯ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ, ಅನ್ವಯವಾಗುವ ಶಿಸ್ತು ನಿಯಮಗಳ ಅಡಿಯಲ್ಲಿ ಒಟ್ಟು 1,083 ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ” ಎಂದು ಲಿಖಿತ ಪ್ರಶ್ನೆಗೆ ಉತ್ತರಿಸಿದ ವೇಳೆ ತಿಳಿಸಿದ್ದಾರೆ.
ಮೂಲಭೂತ ನಿಯಮಗಳು (ಎಫ್ಆರ್) 56 (ಜೆ), ಕೇಂದ್ರ ನಾಗರಿಕ ಸೇವೆಗಳ (ಪಿಂಚಣಿ) ನಿಯಮಗಳು, 1972 ರ ನಿಯಮ 48 ಮತ್ತು ಅಖಿಲ ಭಾರತ ಸೇವೆಗಳ ನಿಯಮ 16 (3) (ತಿದ್ದುಪಡಿ) (ಡೆತ್-ಕಮ್-ರಿಟೈರ್ಮೆಂಟ್ ಬೆನಿಫಿಟ್ಸ್) [ ಎಐಎಸ್ (ಡಿಸಿಆರ್ ಬಿ)] ನಿಯಮ 1958ಗಳು ಎಲ್ಲಾ ಹಂತಗಳಲ್ಲಿ ಸಮಗ್ರತೆಯ ಕೊರತೆ ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ಅಸಮರ್ಥತೆಯ ಕಾರಣಕ್ಕಾಗಿ ಸರ್ಕಾರಿ ನೌಕರರ ಅಕಾಲಿಕ ನಿವೃತ್ತಿಯನ್ನು ಪರಿಶೀಲನೆ ನಡೆಸುವ ಕಾರ್ಯವಿಧಾನವನ್ನು ತಿಳಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
“ಅನ್ವಯವಾಗುವ ಶಿಸ್ತು ನಿಯಮಗಳಲ್ಲಿನ ನಿಬಂಧನೆಗಳ ಪ್ರಕಾರ, ಸರ್ಕಾರಿ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಯಾವುದೇ ದಂಡ ವಿಧಿಸುವ ಮೊದಲು ಸರ್ಕಾರಿ ನೌಕರರಿಗೆ ಸಾಕಷ್ಟು ಡಿಫೆನ್ಸ್ ಅವಕಾಶಗಳನ್ನು ಒದಗಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.