ಜಮ್ಮು: ಕಾರ್ಗಿಲ್ ವಿಜಯ್ ದಿವಸ್ಗೂ ಮುಂಚಿತವಾಗಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳಿ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವಾರ್ಪಣೆ ಮಾಡಿದ್ದಾರೆ.
ಭಾರತೀಯ ಸೇನೆಯು ಕಾರ್ಗಿಲ್ ವಿಜಯದ 20ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕಣಿವೆ ರಾಜ್ಯದ ಮೂರೂ ಪ್ರದೇಶಗಳಿಗೆ ಭೇಟಿ ನೀಡಲಿರುವ ಅವರಿಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸಾಥ್ ನೀಡುತ್ತಿದ್ದಾರೆ.
ಜಮ್ಮುವಿಗೆ ಭೇಟಿಯನ್ನು ನೀಡಲಿರುವ ಅವರು ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿ ನಿರ್ಮಿಸಲಾದ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ.
“ರಕ್ಷಣಾ ಸಚಿವರು ದ್ರಾಸ್ನಲ್ಲಿರುವ ಯುದ್ಧ ಸ್ಮಾರಕದಲ್ಲಿ ಗೌರವ ಸಲ್ಲಿಸಲಿದ್ದಾರೆ. ನಿಯೋಜಿತ ಸೈನಿಕರ ಸನ್ನದ್ಧತೆಯನ್ನು ಪರಿಶೀಲಿಸಲು ಅವರು ಲಡಾಖ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್ಎಸಿ) ಭೇಟಿ ನೀಡಲಿದ್ದಾರೆ. ಅವರು ಕಣಿವೆಗೆ ಭೇಟಿ ನೀಡಿ ಅಲ್ಲಿನ ಗಡಿ ನಿಯಂತ್ರಣ ರೇಖೆ (ಎಲ್ಒಸಿ)ಯ ಭದ್ರತಾ ಪರಿಸ್ಥಿತಿಯನ್ನೂ ಪರಿಶೀಲಿಸಲಿದ್ದಾರೆ” ಎಂದು ಮೂಲಗಳು ತಿಳಿಸಿವೆ.
ದೇಶದ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜನಾಥ್ ಸಿಂಗ್ ಅವರು ಜಮ್ಮುಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಆದರೆ ಅವರು ಜೂನ್ 3 ರಂದು ಲಡಾಖ್ ಮತ್ತು ಕಣಿವೆಗೆ ಭೇಟಿ ನೀಡಿದ್ದರು.
ಜುಲೈ 14ರಂದು ರಾಜನಾಥ್ ಸಿಂಗ್ ಅವರು ಕಾರ್ಗಿಲ್ ವಿಜಯದ ಜ್ಯೋತಿಯನ್ನು ದೆಹಲಿಯಲ್ಲಿ ಬೆಳಗಿಸಿದ್ದಾರೆ, ವಿವಿಧ ನಗರಗಳನ್ನು ಸುತ್ತಿ ಅದು ಜುಲೈ 24ರಂದು ದ್ರಾಸ್ ಗೆ ತಲುಪಲಿದೆ. ಕಾರ್ಗಿಲ್ ವಾರ್ ಮೆಮೋರಿಯಲ್ ಜ್ಯೋತಿಯಲ್ಲಿ ವಿಲೀನಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.