ಹರಿದ್ವಾರ: ಇನ್ನುಮುಂದೆ ಪವಿತ್ರ ಧಾರ್ಮಿಕ ಸ್ಥಳಗಳಾದ ಹರಿದ್ವಾರ ಮತ್ತು ಹೃಷಿಕೇಶಕ್ಕೆ ತೆರಳುವ ಭಕ್ತರು ಪ್ಲಾಸ್ಟಿಕ್ ಬ್ಯಾಗುಗಳನ್ನು ಬಳಕೆ ಮಾಡುವಂತಿಲ್ಲ. ಹಾಗೊಂದು ವೇಳೆ ಬಳಕೆ ಮಾಡಿದರೆ 5,000 ರೂಪಾಯಿ ದಂಡ ನೀಡಬೇಕಾಗುತ್ತದೆ.
ಈ ಪವಿತ್ರ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಇಲ್ಲಿ ಪ್ಲಾಸ್ಟಿಕ್ಗೆ ನಿಷೇಧ ಹೇರಿದೆ. ಗಂಗಾ ನದಿ ನೀರು ಮಾಲಿನ್ಯದ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಈ ನಿಷೇಧವನ್ನು ಹೇರಲಾಗಿದೆ.
ಗಂಗಾ ನದಿ ತೀರದಲ್ಲಿ ಭಕ್ತರು ಪ್ಲಾಸ್ಟಿಕ್ ಸೇರಿದಂತೆ ಅನೇಕ ವಸ್ತುಗಳನ್ನು ಎಸೆದು ನದಿ ನೀರನ್ನು ಮಾಲಿನ್ಯಗೊಳಿಸುತ್ತಿದ್ದಾರೆ. ಜಿಲ್ಲಾಡಳಿತ ಮಾತ್ರ ಇದನ್ನು ಕಂಡೂ ಕಾಣದಂತೆ ಸುಮ್ಮನಿದೆ, ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ.
ಹೀಗಾಗಿ ಆಹಾರ ಪೂರೈಕೆಗಾಗಲಿ, ಪ್ರಸಾದ ಕೊಂಡೊಯ್ಯಲು, ವಸ್ತುಗಳನ್ನು ತರಲು ಹೀಗೆ ಯಾವುದೇ ಕಾರಣಕ್ಕಾಗಿ ಪ್ಲಾಸ್ಟಿಕ್ಗಳನ್ನು ಬಳಕೆ ಮಾಡಬಾರದು ಎಂದು ಕಟ್ಟುನಿಟ್ಟಾಗಿ ತಿಳಿಸಿದೆ. ಪೊಲೀಸರು ಈ ಬಗ್ಗೆ ಗಮನವಹಿಸಬೇಕು ಎಂದು ಸೂಚನೆ ನೀಡಿದೆ.
ಧಾರ್ಮಿಕ ಸ್ಥಳಗಳ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾದ ಮಹತ್ವದ ನಿರ್ಧಾರ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.