ನವದೆಹಲಿ: ದೇಶದಾದ್ಯಂತ ಅದರಲ್ಲೂ ಮುಖ್ಯವಾಗಿ ನೀರಿನ ಕೊರತೆಯಿರುವ ಪ್ರದೇಶಗಳಲ್ಲಿ ಜಲ ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ, ಕೇಂದ್ರ ಸರ್ಕಾರವು ಜಲಶಕ್ತಿ ಅಭಿಯಾನದ ಮೂಲಕ 256 ಜಿಲ್ಲೆಗಳಲ್ಲಿ ಸುಮಾರು 3.5 ಲಕ್ಷ ನೀರು ಸಂರಕ್ಷಣಾ ಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಕೇವಲ ಒಂದು ತಿಂಗಳಲ್ಲಿ ಇಷ್ಟು ದೊಡ್ಡ ಸಾಧನೆಯನ್ನು ಮಾಡಿದೆ.
ಈ ಪೈಕಿ 1.54 ಲಕ್ಷ ನೀರು ಸಂರಕ್ಷಣೆ ಮತ್ತು ಮಳೆನೀರು ಕೊಯ್ಲು ಕ್ರಮಗಳು, 20,000 ಸಾಂಪ್ರದಾಯಿಕ ಜಲಮೂಲಗಳ ಪುನರುಜ್ಜೀವನಕ್ಕೆ ಸಂಬಂಧಿಸಿವೆ, 65,000 ಕ್ಕೂ ಹೆಚ್ಚು ಮರುಬಳಕೆ ಮತ್ತು ಪುನರ್ಭರ್ತಿ ರಚನೆಗಳು ಮತ್ತು 1.23 ಲಕ್ಷ ಜಲಾನಯನ ಅಭಿವೃದ್ಧಿ ಯೋಜನೆಗಳು. ಅಂದಾಜು 2.64 ಕೋಟಿ ಜನರು ಈಗಾಗಲೇ ಅಭಿಯಾನದಲ್ಲಿ ಭಾಗವಹಿಸಿದ್ದಾರೆ, ಇದರಿಂದ ಜನ ಆಂದೋಲನವಾಗಿ ಮಾರ್ಪಡಾಗಿದೆ.
ಪ್ರಯತ್ನದ ಭಾಗವಾಗಿ ಸುಮಾರು 4.25 ಕೋಟಿ ಸಸಿಗಳನ್ನು ನೆಡಲಾಗಿದೆ. ನಿನ್ನೆ ನವದೆಹಲಿಯಲ್ಲಿ ಸಂಪುಟ ಕಾರ್ಯದರ್ಶಿ ನಡೆಸಿದ ಪರಿಶೀಲನೆಯಲ್ಲಿ ಜಲಶಕ್ತಿ ಅಭಿಯಾನದ ಮೊದಲ ಹಂತದ ಫಲಿತಾಂಶಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಂಪುಟ ಕಾದರ್ಶಿ ಪ್ರದೀಪ್ ಕುಮಾರ್ ಸಿನ್ಹಾ ಅವರು, ಅಭಿಯಾನದಲ್ಲಿ ನೋಡಲ್ ಅಧಿಕಾರಿಗಳು ತೋರಿಸಿದ ಪ್ರಯತ್ನಗಳು ಮತ್ತು ಬದ್ಧತೆಯನ್ನು ಶ್ಲಾಘಿಸಿದರು. ಅಲ್ಲದೇ ಪ್ರಮುಖ ಮಧ್ಯಸ್ಥಿಕೆಗಳು ಮತ್ತು ಉಪಕ್ರಮಗಳ ಮೂಲಕ ಗಮನಾರ್ಹ ಬದಲಾವಣೆಗಳನ್ನು ತರಲು ಜಿಲ್ಲೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುವಂತೆ ಅವರನ್ನು ಪ್ರೋತ್ಸಾಹಿಸಿದರು. “ಜಲಶಕ್ತಿ ಅಭಿಯಾನವು ಖಂಡಿತವಾಗಿಯೂ ದೇಶದಲ್ಲಿ ಸಾಕಷ್ಟು ಸಂಚಲನವನ್ನು ಸೃಷ್ಟಿಸಿದೆ, ಮತ್ತು ಮುಂದಿನ ವರ್ಷಗಳಲ್ಲಿ ಇದು ಸಾಕಷ್ಟು ಒಳ್ಳೆಯದನ್ನು ಮಾಡಲಿದೆ. ತಳಮಟ್ಟದಲ್ಲಿ ರೈತರಿಗೆ ಪ್ರಯೋಜನಗಳು ತಲುಪುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಉದ್ದೇಶ ಎಂದಿದ್ದಾರೆ.
ಕೇಂದ್ರ ಸರ್ಕಾರದ ಅಧಿಕಾರಿಗಳು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸುಮಾರು 1300 ಅಧಿಕಾರಿಗಳು ಜಲಶಕ್ತಿ ಆಂದೋಲದಲ್ಲಿ ಪಾಲ್ಗೊಂಡಿದ್ದಾರೆ. ತಲಾ ಒಬ್ಬ ಅಧಿಕಾರಿಗಳು ಮೂರು 3 ಕ್ಷೇತ್ರಗಳ ಭೇಟಿ ಕೈಗೊಳ್ಳಬೇಕಾದ ಅಭಿಯಾನವು ಯಶಸ್ವಿಯಾಗಿ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.