ನವದೆಹಲಿ: ಸಂಸದರಿಗೆ ತರಬೇತಿಯನ್ನು ನೀಡುವ ಸಲುವಾಗಿ ಬಿಜೆಪಿ ಎರಡು ದಿನಗಳ ‘ಅಭ್ಯಾಸ ವರ್ಗ’ವನ್ನು ಆರಂಭಿಸಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಚಾಲನೆ ದೊರೆತಿದೆ. ನಡವಳಿಕೆ, ಶಿಸ್ತು, ಸಂಸದೀಯ ಪ್ರಕ್ರಿಯೆ, ಸೈದ್ದಾಂತಿಕ ವಿಷಯಗಳ ಬಗ್ಗೆ ಇಲ್ಲಿ ಸಂಸದರಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಬಿಜೆಪಿಯ ಎಲ್ಲಾ ಸಂಸದರಿಗೂ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕಾರ್ಯಾಗಾರದ ನೇತೃತ್ವವನ್ನು ವಹಿಸಿದ್ದಾರೆ.
ನಡ್ಡಾ ಅವರು ಉದ್ಘಾಟನಾ ಭಾಷಣದೊಂದಿಗೆ ಕಾರ್ಯಾಗಾರ ಆರಂಭಗೊಂಡಿದೆ, ಅಮಿತ್ ಶಾ ಅವರು ಇಲ್ಲಿ ಸಂಸತ್ತಿನಲ್ಲಿ ಸಂಸದರ ಪಾತ್ರದ ಬಗ್ಗೆ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ನಾಳೆ ಮಾತನಾಡಲಿದ್ದಾರೆ.
ಕಾರ್ಯಾಗಾರ ನಡೆಯುವ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರವೇಶವಿಲ್ಲ, ಮುಕ್ತಾಯವಾದ ಬಳಿಕವಷ್ಟೇ ಮುಖಂಡರು ಮಾಧ್ಯಮಕ್ಕೆ ವಿವರಣೆಯನ್ನು ನೀಡುತ್ತಾರೆ ಎಂದು ಹೇಳಲಾಗಿದೆ.
ಸಂಸದರು ಸಂಸತ್ತಿನ ಒಳಗೆ ಮತ್ತು ಹೊರಗೆ ಶಿಸ್ತನ್ನು ಕಾಪಾಡಿಕೊಳ್ಳುವ ಸಲುವಾಗಿ, ವಿವಾದಗಳನ್ನು ಸೃಷ್ಟಿಸುವಂತಹ ಹೇಳಿಕೆಗಳನ್ನು ನೀಡದಂತೆ ನೋಡಿಕೊಳ್ಳುವ ಸಲುವಾಗಿ, ಸಕ್ರಿಯವಾಗಿ ಸಂಸತ್ತಿಗೆ ಹಾಜರಾಗುವಂತೆ ಮತ್ತು ಚರ್ಚೆಯಂತೆ ಪಾಲ್ಗೊಳ್ಳುವ ಸಲುವಾಗಿ ಇಲ್ಲಿ ತರಬೇತಿಯನ್ನು ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.