ಮುಂಬಯಿ: ಕಾಶ್ಮೀರದಲ್ಲಿ ಮಧ್ಯರಾತ್ರಿ ನಡೆದ ಬೆಳವಣಿಗೆಯನ್ನು ಹಲವಾರು ರಾಜಕೀಯ ಮುಖಂಡರುಗಳನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅಲ್ಲಿನ ಉನ್ನತ ನಾಯಕರುಗಳಾದ ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಸಜ್ಜದ್ ಲೋನ್ ಮುಂತಾದವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಇಂಟರ್ನೆಟ್ ಸೇವೆಯನ್ನು ಅಲ್ಲಿ ಸ್ಥಗಿತಗೊಳಿಸಲಾಗಿದ್ದು, ಯಾರೊಬ್ಬರೂ ಸಭೆ, ಸಮಾವೇಶಗಳನ್ನು ನಡೆಸದಂತೆ ನಿಷೇಧವನ್ನು ಹೇರಲಾಗಿದೆ.
ನಾವು ಗೃಹ ಬಂಧನದಲ್ಲಿದ್ದೇವೆ ಎಂದು ಮಧ್ಯರಾತ್ರಿ ನಾಯಕರುಗಳು ಟ್ವಿಟ್ ಮಾಡಿದ ತಕ್ಷಣವೇ ಅಲ್ಲಿನ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಿದ್ದಾರೆ.
ರಾಜ್ಯದ ಹಲವಾರು ಭಾಗಗಳಲ್ಲಿ ಮೊಬೈಲ್ ಫೋನ್, ಲ್ಯಾಂಡ್ ಲೈನ್ ಸೇವೆ ಮತ್ತು ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆಗೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಬಾಲಿವುಡ್ ನಟ ಅನುಪಮ್ ಖೇರ್, ‘ಕಾಶ್ಮೀರ ಸಮಸ್ಯೆಯ ಪರಿಹಾರ ಆರಂಭವಾಗಿದೆ’ ಎಂದಿದ್ದಾರೆ.
ಕಾಶ್ಮೀರದಲ್ಲಿ ಬೃಹತ್ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸುತ್ತಿರುವ ಭಾಗವಾಗಿ ರಾಜಕೀಯ ನಾಯಕರುಗಳನ್ನು ಗೃಹಬಂಧನದಲ್ಲಿ ಇಡಲಾಗಿದೆ. ಈಗಾಗಲೇ ಅಲ್ಲಿನ ಯಾತ್ರಿಕರನ್ನು, ಪ್ರವಾಸಿಗರನ್ನು ಕಾಶ್ಮೀರ ಬಿಟ್ಟು ತೆರಳುವಂತೆ ಸೂಚಿಸಲಾಗಿದೆ.
ಶುಕ್ರವಾರ ಅಮರನಾಥ ಯಾತ್ರೆಯನ್ನು ರದ್ದುಗೊಳಿಸುವಂತೆ ತಿಳಿಸಲಾಗಿದ್ದು, ಪಾಕಿಸ್ಥಾನದ ಸೇನೆ ಬೆಂಬಲಿತ ಉಗ್ರರ ದಾಳಿ ನಡೆಯುವ ಬೆದರಿಕೆಯ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
ನರೇಂದ್ರ ಮೋದಿ ಸರ್ಕಾರ ಬೆಂಬಲಿಗನಾದ ಬಾಲಿವುಡ್ ನಟ ಅನುಪಮ್ ಖೇರ್ ಅವರು, ಕಾಶ್ಮೀರದ ವಿಷಯದಲ್ಲಿ ಮೋದಿ ಸರ್ಕಾರದ ನಿಲುವನ್ನು ಬೆಂಬಲಿಸಿದ್ದು, “ಕಾಶ್ಮೀರ ಪರಿಹಾರ ಆರಂಭವಾಗಿದೆ’ ಎಂದಿದ್ದಾರೆ.
ಕಲಂ 370 ಅನ್ನು ತೆಗೆದು ಹಾಕಿದರೆ ಕಾಶ್ಮೀರದ ಸಮಸ್ಯೆ ಪರಿಹಾರವಾಗುತ್ತದೆ ಎಂದು ಖೇರ್ ಪ್ರತಿಪಾದಿಸಿದ್ದಾರೆ.
ಕಾಶ್ಮೀರದಲ್ಲಿ ಕಲಂ 370 ಮತ್ತು ಕಲಂ 35 ಎ ಅನ್ನು ತೆಗೆದು ಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿದೆಯೇ ಎಂಬ ಬಗ್ಗೆ ಹಲವಾರು ಮಂದಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಸ್ಪಷ್ಟ ಉತ್ತರವನ್ನು ನೀಡಿಲ್ಲ.
ಜಮ್ಮು ಕಾಶ್ಮೀರಕ್ಕೆ ಒಂದು ವಾರದಲ್ಲಿ 35 ಸಾವಿರ ಹೆಚ್ಚುವರಿ ಸೇನಾಪಡೆಗಳನ್ನು ರವಾನಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.