ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದ ಕುತೂಹಲಗಳಿಗೆ ತೆರೆ ಬಿದ್ದಿದೆ. ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ ಕಲಂ 370 ಅನ್ನು ತೆಗೆದು ಹಾಕಲು ನಿರ್ಧರಿಸಿರುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ಅಮಿತ್ ಶಾ ಅವರು ಕಲಂ 370 ಪ್ರಸ್ತಾಪವನ್ನು ಮಂಡನೆಗೊಳಿಸುತ್ತಿದ್ದಂತೆ ರಾಜ್ಯಸಭೆಯಲ್ಲಿ ಭಾರೀ ಗದ್ದಲ ಎಬ್ಬಿದೆ. ಹೀಗಾಗಿ ಕಲಾಪವನ್ನು ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರು ಮುಂದೂಡಿದ್ದಾರೆ.
ಭಾರತದ ಪಾಲಿಗೆ ಇದೊಂದು ಐತಿಹಾಸಿಕ ನಿರ್ಧಾರವಾಗಿದ್ದು, ನಿಜವಾದ ಅರ್ಥದಲ್ಲೂ ಜಮ್ಮು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಬದ್ಧತೆಯ ನಿರ್ಧಾರವವಾಗಿದೆ. ಚುನಾವಣಾ ಪ್ರಣಾಳಿಕಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿಕೊಂಡಿರುವ ಬಿಜೆಪಿಗೆ ಸಮಸ್ತ ಭಾರತೀಯರಿಂದ ಅಭಿನಂದನೆಗಳು ಹರಿದು ಬರುತ್ತಿದೆ.
ಕಲಂ 370 ಜಮ್ಮು ಕಾಶ್ಮೀರಕ್ಕೆ ನೀಡಿರುವ ವಿಶೇಷಾಧಿಕಾರದ ಪಟ್ಟಿ ಇಲ್ಲಿದೆ
1.ಸಂವಿಧಾನದ 370 ನೇ ವಿಧಿಯ ಪ್ರಕಾರ ಜಮ್ಮು-ಕಾಶ್ಮೀರಕ್ಕೆ ಆರು ವಿಶೇಷ ಸವಲತ್ತುಗಳನ್ನು, ಉಪಕ್ರಮಗಳನ್ನು ಹಾಗೂ ವಿನಾಯಿತಿಗಳನ್ನು ನೀಡಲಾಗಿದೆ.
2.ಜಮ್ಮು ಮತ್ತು ಕಾಶ್ಮೀರ ಭಾರತ ಗಣರಾಜ್ಯದ ಅಂಗವಾದರೂ ಪ್ರತ್ಯೇಕ ಸಂವಿಧಾನವನ್ನು ಹೊಂದಬಹುದು.
3.ರಕ್ಷಣೆ, ಹಣಕಾಸು, ವಿದೇಶಾಂಗ ವ್ಯವಹಾರ ಹಾಗೂ ಸಂಪರ್ಕ ಈ ಖಾತೆಗಳಿಗೆ ಮಾತ್ರ ಭಾರತದ ಕಾನೂನು ಹಾಗೂ ಸಂವಿಧಾನ ಕಾಶ್ಮೀರಕ್ಕೆ ಅನ್ವಯವಾಗುತ್ತದೆ.
4.ಭಾರತದ ಸಂವಿಧಾನದ ಎಲ್ಲಾ ವಿಧಿ-ವಿಧಾನಗಳನ್ನು ಅನುಷ್ಠಾನಗೊಳಿಸಬೇಕು ಎಂದರೆ ಜಮ್ಮು-ಕಾಶ್ಮೀರದ ಅನುಮತಿ ಪಡೆಯಬೇಕು
5.ಜಮ್ಮು-ಕಾಶ್ಮೀರ ಭಾರತದೊಳಗೆ ವಿಲೀನಗೊಳಿಸಬೇಕೆಂದು ರಾಜ್ಯ ಸರಕಾರ ನಿರ್ಧರಿಸಿದರೆ, ತನ್ನ ಸಂವಿಧಾನಕ್ಕೆ ತಿದ್ದುಪಡಿ ಮಾಡಿ ವಿಧಾನಸಭೆಯ ಮುಂದೆ ಮಂಡಿಸಬೇಕು.
6.ವಿಧಾನಸಭೆ ಅದಕ್ಕೆ ಅನುಮೋದನೆ ನೀಡಿದರೆ ಅದನ್ನು ಮಧ್ಯಂತರ ಅಧಿಕಾರ ಎಂದು ಪರಿಗಣಿಸಲಾಗುವುದು. ಅಂದರೆ ವಿಲೀನಗೊಳಿಸುವ ಪರಮಾಧಿಕಾರ ಅಲ್ಲಿನ ವಿಧಾನಸಭೆಗೂ ಇಲ್ಲ ಅಂದಂಗಾಯಿತು.
7.ರಾಷ್ಟ್ರಪತಿ ಏನಾದರು ಈ ವಿಧಿಯನ್ನು ರದ್ದುಗೊಳಿಸಿ ಭಾರತದೊಳಗೆ ಜಮ್ಮು-ಕಾಶ್ಮೀರವನ್ನು ವಿಲೀನಗೊಳಿಸುವುದಕ್ಕೆ ಮುಂದಾದರೆ ರಾಜ್ಯ ಸರಕಾರದ ಶಿಫಾರಸು ಅಗತ್ಯ.
ಈ ಕಲಂ ಅನ್ನು ತೆಗೆದು ಹಾಕಲು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಂಡನೆಗೊಳಿಸುವುದಕ್ಕೂ ಮುನ್ನ ಕೇಂದ್ರ ಸರ್ಕಾರ ಭಾರೀ ಮುಂಜಾಗೃತ ಕ್ರಮವನ್ನು ತೆಗೆದುಕೊಂಡಿದೆ. 35 ಸಾವಿರಕ್ಕೂ ಹೆಚ್ಚು ಯೋಧರನ್ನು ಅಲ್ಲಿ ನಿಯೋಜಿಸಿದೆ. ಮಾತ್ರವಲ್ಲ ಅಲ್ಲಿನ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಿದೆ ಮತ್ತು ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.