ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕರ್ನಾಟಕದ ನೆರೆಪೀಡಿತ ಭಾಗಗಳಲ್ಲಿ ಸೋಮವಾರ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಸುರಿಯುತ್ತಿರುವ ಭಾರೀ ಮಳೆ ಮತ್ತು ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದಾಗಿ ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಹ ಏರ್ಪಟ್ಟಿದೆ.
ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಿಂದ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಡಿಯೂರಪ್ಪ, ಬಳಿಕ ವಿಶೇಷ ವಿಮಾನದಲ್ಲಿ ನೆರೆ ಪರಿಸ್ಥಿತಿ ಅಧ್ಯಯನ ನಡೆಸಿದರು.
ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವಾಹ ಸಂತ್ರಸ್ಥರ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ, ಪರಿಹಾರ ಕಾರ್ಯ ಕೈಗೊಳ್ಳಲು ಅನುದಾನದ ಕೊರತೆ ಇಲ್ಲ. ತಕ್ಷಣ ಪರಿಹಾರ ಕಾರ್ಯದಲ್ಲಿ ನಿರತರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
“ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಉತ್ತರ ಕರ್ನಾಟಕದಲ್ಲಿ ಪ್ರವಾಹ ಏರ್ಪಟ್ಟಿದೆ. ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನು ನಡೆಸಲಾಗಿದೆ. ತಕ್ಷಣ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದೇನೆ, ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಜನ ಜಾನುವಾರುಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುವುದು” ಎಂದಿದ್ದಾರೆ.
ವೈಮಾನಿಕ ಸಮೀಕ್ಷೆ ನಂತರ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೆರೆ ಪರಿಹಾರಕ್ಕೆ ಹೆಚ್ಚಿನ ನೆರವು ಕೊಡುವಂತೆ ಮನವಿ ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.