ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ 370 ನೇ ವಿಧಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವು ರಾಷ್ಟ್ರೀಯ ಏಕೀಕರಣದ ಬಗೆಗಿನ ಒಂದು ಮಹತ್ವದ ನಿರ್ಧಾರವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಟ್ವೀಟ್ ಮಾಡಿದ್ದಾರೆ.
“ಐತಿಹಾಸಿಕ ತಪ್ಪನ್ನು ಇಂದು ಸರಿಪಡಿಸಲಾಗಿದೆ”ಎಂದು ಜೇಟ್ಲಿ ಬಣ್ಣಿಸಿದ್ದಾರೆ. ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡುವ ಕಲಂ 370 ಅನ್ನು ಹಿಂಬರಿಯ ಮೂಲಕ ಸಂವಿಧಾನಕ್ಕೆ ಸೇರ್ಪಡೆಗೊಳಿಸಲಾಯಿತು. ಪ್ರತ್ಯೇಕ ಸ್ಥಾನಮಾನ ನೀಡುವುದು ರಾಜ್ಯವನ್ನು ದೇಶದಿಂದಲೇ ಪ್ರತ್ಯೇಕಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಐತಿಹಾಸಿಕ ಪ್ರಮಾದವನ್ನು ಸರಿಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನನ್ನ ಅಭಿನಂದನೆಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಸರ್ಕಾರ ತೆಗೆದುಕೊಂಡ ನಿರ್ಧಾರವು ಕಾಶ್ಮೀರದ ಜನತೆಗೆ ಹೆಚ್ಚಿನ ಬಂಡವಾಳ, ಹೆಚ್ಚಿನ ಕೈಗಾರಿಕೆ, ಹೆಚ್ಚಿನ ಖಾಸಗಿ ಶೈಕ್ಷಣಿಕ ಸಂಸ್ಥೆ, ಹೆಚ್ಚಿನ ಉದ್ಯೋಗ ಮತ್ತು ಹೆಚ್ಚಿನ ಆದಾಯವನ್ನು ತಂದುಕೊಡಲಿದೆ ಎಂದು ಅವರು ಹೇಳಿದ್ದಾರೆ.
ಸರಣಿ ಟ್ವಿಟ್ಗಳ ಮೂಲಕ ಅರುಣ್ ಜೇಟ್ಲಿ ಅವರು ಸರ್ಕಾರದ ನಿರ್ಧಾರವನ್ನು ಹೊಗಳಿದ್ದಾರೆ.
ಗೃಹಸಚಿವ ಅಮಿತ್ ಶಾ ಅವರು ಇಂದು ರಾಜ್ಯಸಭೆಯಲ್ಲಿ ಕಲಂ 370 ಅನ್ನು ರದ್ದುಪಡಿಸುವುದಾಗಿ ಮತ್ತು ಜಮ್ಮು ಕಾಶ್ಮೀರವನ್ನು ಮತ್ತು ಲಡಾಖ್ ಅನ್ನು ಪ್ರತ್ಯೇಕಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.