ನವದೆಹಲಿ: ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನದ ಕಲಂ 370 ಅನ್ನು ತೆಗೆದು ಹಾಕುವುದಾಗಿ ಘೋಷಣೆ ಮಾಡಿದ ಬಳಿಕ ಜಮ್ಮು ಕಾಶ್ಮೀರದ ವಿವಿಧ ಭಾಗಗಳಿಗೆ ಸುಮಾರು 8,000 ಪ್ಯಾರಮಿಲಿಟರಿ ಪಡೆಗಳನ್ನು ಕಳುಹಿಸಿಕೊಡಲಾಗಿದೆ. ಭಾರತೀಯ ವಾಯುಸೇನೆಯ ಸಿ-17 ಟ್ರಾನ್ಸ್ಪೋರ್ಟ್ ವಿಮಾನಗಳು ಸೈನಿಕರನ್ನು ಶ್ರೀನಗರಕ್ಕೆ ತಲುಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಜಮ್ಮು ಕಾಶ್ಮೀರಕ್ಕೆ 35 ಸಾವಿರ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದ್ದು, ವಿವಿಧ ಭಾಗಗಳಲ್ಲಿ ನಿಯೋಜನೆಗೊಳಿಸಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ ಇಂದು ಕಲಂ 370 ರದ್ಧತಿಯ ಘೋಷಣೆಯ ಬಳಿಕ ಮತ್ತೆ 8 ಸಾವಿರ ಯೋಧರನ್ನು ಕಳುಹಿಸಿಕೊಡಲಾಗಿದೆ.
ಪ್ರಸ್ತುತ ಅಲ್ಲಿ ಸೇನೆ ಮತ್ತು ವಾಯುಸೇನೆಯನ್ನು ಹೈಅಲರ್ಟ್ನಲ್ಲಿ ಇರುವಂತೆ ಸೂಚಿಸಲಾಗಿದೆ.
ಕಲಂ 370 ರದ್ಧತಿಯನ್ನು ಘೋಷಣೆ ಮಾಡುವುದಕ್ಕೂ ಒಂದು ವಾರಗಳ ಮುಂಚಿತವಾಗಿ ಕೇಂದ್ರ ಸರ್ಕಾರ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಅಮರನಾಥ ಯಾತ್ರೆಯನ್ನು ರದ್ದುಪಡಿಸಿದೆ. ಯಾತ್ರಿಕರನ್ನು ಮತ್ತು ಪ್ರವಾಸಿಗರನ್ನು ವಾಪಾಸ್ ಕಳುಹಿಸಿದೆ.
ಕಲಂ 370 ರದ್ಧತಿಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಗಲಾಟೆ ದೊಂಬಿಗಳಾಗುವ ಸಾಧ್ಯತೆಗಳು ಇರುವುದರಿಂದ ಭಾರೀ ಪ್ರಮಾಣದಲ್ಲಿ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.