ನವದೆಹಲಿ: ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಮತ್ತು ಅದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನೂ ಒಳಗೊಂಡಿದೆ. ಜಮ್ಮು ಕಾಶ್ಮೀರದ ಬಗ್ಗೆ ನಾನು ಮಾತನಾಡುವಾಗ ಪಿಓಕೆಯೂ ಸೇರಿರುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ. 370ನೇ ವಿಧಿ ರದ್ಧತಿ ಸಂಬಂಧಿಸಿದ ಪ್ರಸ್ತಾಪವನ್ನು ಅವರಿಂದು ಲೋಕಸಭೆಯಲ್ಲಿ ಮಂಡನೆಗೊಳಿಸಿದರು.
“ಇದು ರಾಜಕೀಯ ನಡೆಯಲ್ಲ, ಇಡೀ ದೇಶಕ್ಕೆ ಕಾನೂನುಗಳನ್ನು ಮಾಡುವ ಅಧಿಕಾರ ಸಂಸತ್ತಿಗೆ ಇರುತ್ತದೆ. ಭಾರತ ಸಂವಿಧಾನ ಮತ್ತು ಜಮ್ಮು ಕಾಶ್ಮೀರದ ಸಂವಿಧಾನ ಎರಡೂ ಇದಕ್ಕೆ ಅನುಮತಿ ನೀಡುತ್ತದೆ” ಎಂದು ಅಮಿತ್ ಶಾ ಪ್ರತಿಪಕ್ಷಗಳ ಸದಸ್ಯರುಗಳಿಗೆ ಹೇಳಿದ್ದಾರೆ.
“ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ನಾವು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಮಾತನಾಡುವಾಗಲೆಲ್ಲಾ ಅದರಲ್ಲಿ ಪಾಕ್ ಆಕ್ರಮಿತ ಕಾಶ್ಮೀರ (ಗಿಲ್ಗಿಟ್-ಬಲೂಚಿಸ್ತಾನ್ಸೇರಿದಂತೆ) ಮತ್ತು ಅಕ್ಸಾಯ್ ಚಿನ್ ಸೇರಿರುತ್ತದೆ ಎಂದು ನಾನು ಸಂಪೂರ್ಣವಾಗಿ ಸ್ಪಷ್ಟಪಡಿಸುತ್ತೇನೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಸಂಪೂರ್ಣ ಜಮ್ಮು ಮತ್ತು ಕಾಶ್ಮೀರ ಭಾರತದ ಒಕ್ಕೂಟದ ಅವಿಭಾಜ್ಯ ಅಂಗವಾಗಿದೆ ”ಎಂದು ಗೃಹ ಸಚಿವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಭಾರತದ ಬೇರ್ಪಡಿಸಲಾಗದ ಭಾಗವಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ, ಆದರೆ ಇಂದು ಇದು ಭಾರತದ ಆಂತರಿಕ ವಿಷಯವಲ್ಲ ಎಂದು ಕಾಂಗ್ರೆಸ್ ನಾಯಕ ಭಾವಿಸಿದ್ದಾರೆಯೇ ಎಂಬ ಅನುಮಾನ ನನಗೆ ಕಾಡುತ್ತಿದೆ ಎಂದು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ಸಿಗರನ್ನು ಉದ್ದೇಶಿಸಿ ಶಾ ಹೇಳಿದ್ದಾರೆ.
ಅಲ್ಲದೇ, ಜಮ್ಮು ಕಾಶ್ಮೀರದ ವಿಕೇಂದ್ರಿಕರಣ ಮತ್ತು 370ನೇ ವಿಧಿ ರದ್ಧತಿ ಬಗ್ಗೆ ನೀವ್ಯಾಕೆ ಇಷ್ಟೊಂದು ಆಕ್ರಮಣಶೀಲರಾಗುತ್ತಿದ್ದೀರಾ? ಜಮ್ಮು ಕಾಶ್ಮೀರಕ್ಕಾಗಿ ಜೀವ ಸಮರ್ಪಣೆ ಮಾಡಲೂ ನಾವು ಸಿದ್ಧರಿದ್ದೇವೆ ಎಂದು ಶಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.