ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನದ ಹಿನ್ನಲೆಯಲ್ಲಿ ದೆಹಲಿ ಮತ್ತು ಹರಿಯಾಣ ರಾಜ್ಯಗಳು ಎರಡು ದಿನಗಳ ಶೋಕಾಚರಣೆಯನ್ನು ಘೋಷಣೆ ಮಾಡಿವೆ.
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಟ್ವಿಟ್ ಮೂಲಕ ವಿಷಯವನ್ನು ದೃಢಪಡಿಸಿದ್ದಾರೆ. “ಮಾಜಿ ದೆಹಲಿ ಮುಖ್ಯಮಂತ್ರಿ ಮತ್ತು ಹಿರಿಯ ಗೌರವಾನ್ವಿತ ನಾಯಕಿ ಸುಷ್ಮಾ ಸ್ವರಾಜ್ ಅವರ ಗೌರವ ಸ್ಮರಣಾರ್ಥ ಹಿನ್ನಲೆಯಲ್ಲಿ ದೆಹಲಿ ಸರ್ಕಾರವು ಎರಡು ದಿನಗಳ ಶೋಕಾಚರಣೆಯನ್ನು ನಡೆಸಲಿದೆ” ಎಂದಿದ್ದಾರೆ.
ಸಿಸೋಡಿಯಾ ಟ್ವಿಟ್ ಅನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮರು ಟ್ವಿಟ್ ಮಾಡಿದ್ದು, “ಸುಷ್ಮಾ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ. ಎರಡು ದಿನಗಳ ಶೋಕಾಚರಣೆಯ ಮೂಲಕ ರಾಜ್ಯ ಅವರಿಗೆ ಗೌರವ ಸಲ್ಲಿಸಲಿದೆ” ಎಂದಿದ್ದಾರೆ.
ಹರಿಯಾಣ ಸರ್ಕಾರ ಕೂಡ ಎರಡು ದಿನಗಳ ಶೋಕಾಚರಣೆಯನ್ನು ಘೋಷಣೆ ಮಾಡಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಬಹುತೇಕ ಗಣ್ಯರು ಸುಷ್ಮಾ ಅಗಲುವಿಕೆಗೆ ಕಂಬನಿ ಮಿಡಿದಿದ್ದಾರೆ.
ಪ್ರಸ್ತುತ ದೆಹಲಿ ಬಿಜೆಪಿ ಕಛೇರಿಯಲ್ಲಿ ಸುಷ್ಮಾ ಪ್ರಾರ್ಥಿವ ಶರೀರವನ್ನು ಇಡಲಾಗಿದ್ದು, ಸಂಜೆ ಅಂತ್ಯಕ್ರಿಯೆ ಜರುಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.