ನವದೆಹಲಿ: ಅಗಲಿದ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯವನ್ನು ಕೋರಲಾಗಿದೆ. ಲೋಧಿ ರೋಡ್ ವಿದ್ಯುತ್ ಚಿಗಾರದಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಪುತ್ರಿ ಬನ್ಸುರಿ ಸ್ವರಾಜ್ ಮತ್ತು ಪತಿ ಸ್ವರಾಜ್ ಕೌಶಲ್ ಅಂತಿಮ ವಿಧಿವಿಧಾನಗಳನ್ನು ನರೆವೇರಿಸಿದರು.
ಅಂತ್ಯಸಂಸ್ಕಾರಕ್ಕೂ ಮುನ್ನ ಪಾರ್ಥಿವ ಶರೀರವನ್ನು ದೆಹಲಿ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ರಾಜನಾಥ್ ಸಿಂಗ್ ಮುಂತಾದ ಗಣ್ಯರು ಬಂದು ಅಗಲಿದ ನಾಯಕಿಗೆ ಭಾವುಕರಾಗಿ ಅಂತಿಮ ಗೌರವವನ್ನು ಸಲ್ಲಿಸಿದ್ದಾರೆ.
ಮಂಗಳವಾರ 9 ಗಂಟೆಗೆ ಸುಷ್ಮಾ ಸ್ವರಾಜ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರ ಹಠಾತ್ ಮರಣದ ಬಗ್ಗೆ ಪಕ್ಷದ ರಾಜಕೀಯ ನಾಯಕರು ಮತ್ತು ದೇಶದ ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಆಘಾತ ಮತ್ತು ದುಃಖ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಧ್ಯ ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಸ್ವರಾಜ್ ಅವರ ಮನೆಗೆ ಭೇಟಿ ನೀಡಿ ಅಂತಿಮ ಗೌರವ ಸಲ್ಲಿಸಿದರು. ಸ್ವರಾಜ್ ಕೌಶಲ್ ಮತ್ತು ಇತರ ಕುಟುಂಬ ಸದಸ್ಯರಿಗೆ ಸಾಂತ್ವನವನ್ನು ಹೇಳಿದ್ದಾರೆ. ಉಪರಾಷ್ಟ್ರ ಎಂ.ವೆಂಕಯ್ಯ ನಾಯ್ಡು ಮತ್ತು ಗೃಹ ಸಚಿವ ಅಮಿತ್ ಶಾ ಕೂಡ ಗೌರವ ಸಲ್ಲಿಸಿದರು.
ವಿವಿಧ ಪಕ್ಷಗಳ ನಾಯಕರು ಕೂಡ ಸುಷ್ಮಾ ಅಗಲುವಿಕೆಗೆ ಕಂಬನಿ ಮಿಡಿದಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಯಾವತಿ, ಅರವಿಂದ್ ಕೇಜ್ರಿವಾಲ್, ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಸುಷ್ಮಾ ಸಾಧನೆಯನ್ನು ಕೊಂಡಾಡಿ, ಆಕೆಯ ಅಗಲುವಿಕೆಗೆ ಸಂತಾಪ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.