ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಇಸ್ಲಾಮಿಕ್ ಗಣರಾಜ್ಯದ ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ)ಯು ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಮತ್ತು ಜಮಾತ್-ಉದ್-ದವಾ (JuD) ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ನನ್ನು ಭಯೋತ್ಪಾದಕರಿಗೆ ಹಣಕಾಸು ಪೂರೈಕೆ ಪ್ರಕರಣದಲ್ಲಿ ತಪ್ಪಿತಸ್ಥನೆಂದು ನ್ಯಾಯಾಲಯಕ್ಕೆ ತಿಳಿಸಿದೆ.
ಪಾಕಿಸ್ಥಾನದಿಮದ ಕಾರ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್)ನಿಂದ ಹೆಚ್ಚುತ್ತಿರುವ ಒತ್ತಡದ ಹಿನ್ನಲೆಯಲ್ಲಿ ಪಾಕಿಸ್ಥಾನದಲ್ಲಿ ಈ ಬೆಳವಣಿಗೆ ನಡೆದಿದೆ.
ವರದಿಯ ಪ್ರಕಾರ, ಜುಲೈ 17 ರಂದು ಬಂಧನಕ್ಕೊಳಗಾದ ಸಯೀದ್ ವಿರುದ್ಧ ಲಾಹೋರ್ನ ಕೋಟ್ ಲಖ್ಪತ್ ಜೈಲಿನಲ್ಲಿ 23 ಪ್ರಕರಣಗಳನ್ನು ದಾಖಲಿಸಲಾಗಿದೆ. ಟ್ರಸ್ಟ್ಗಳ ಹೆಸರಿನಲ್ಲಿ ಈತ ಭಯೋತ್ಪಾದಕರಿಗೆ ಹಣವನ್ನು ಸಂಗ್ರಹಿಸುತ್ತಿದ್ದ. ಸಯೀದ್ ಜೊತೆಗೆ, ಅವನ ಗುಂಪಿನ 12ಕ್ಕೂ ಹೆಚ್ಚು ಸದಸ್ಯರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.
ಮುಂಬಯಿ ಭಯೋತ್ಪಾದಕ ದಾಳಿಯ ರುವಾರಿಯಾಗಿರುವ ಸಯೀದ್ ಅನ್ನು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ. ಹೀಗೆ ಘೋಷಿಸಲ್ಪಟ್ಟ ತರುವಾಯ ಪಾಕಿಸ್ಥಾನ ಆತನನ್ನು ಬಂಧಿಸಿದೆ. ಬಿಗಿ ಭದ್ರತೆಯ ನಡುವೆ ಆತನನ್ನು ಭಯೋತ್ಪಾದನಾ ನಿಗ್ರಹ ನ್ಯಾಯಾಲಯಕ್ಕೆ (ಎಟಿಸಿ) ಹಾಜರುಪಡಿಸಲಾಗಿದೆ. ಪಂಜಾಬ್ ಪ್ರಾಂತ್ಯದ ಸಿಟಿಡಿ ಅಧಿಕಾರಿಯೊಬ್ಬರು ಸಯೀದ್ನನ್ನು ಭಯೋತ್ಪಾದಕ ಹಣಕಾಸು ಅಪರಾಧಿ ಎಂದು ಘೋಷಿಸಿ ಎಟಿಸಿಯಲ್ಲಿ ಚಲನ್ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.