ನವದೆಹಲಿ: ಹಾಕಿ ಇಂಡಿಯಾದ ಅಧ್ಯಕ್ಷ ಎಂಡಿ ಮುಷ್ತಾಕ್ ಅಹ್ಮದ್ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಶನ್ (ಐಒಎ) ಅಧ್ಯಕ್ಷ ನರಿಂದರ್ ಧ್ರುವ್ ಬಾತ್ರಾ ಜಂಟಿಯಾಗಿ ಒರಿಸ್ಸಾ ಸಿಎಂ ರಿಲೀಫ್ ಫಂಡ್ಗೆ 31 ಲಕ್ಷ ರೂ.ಗಳನ್ನು ಕೊಡುಗೆ ನೀಡಿದ್ದಾರೆ.
ಹಣದ ಚೆಕ್ ಅನ್ನು ಭುವನೇಶ್ವರದಲ್ಲಿ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಹಸ್ತಾಂತರ ಮಾಡಿದ್ದಾರೆ.
ಮೇ 3 ರಂದು ಒರಿಸ್ಸಾಗೆ ಅಪ್ಪಳಿಸಿದ ಫೋನಿ ಚಂಡಮಾರುತವು ಭಾರೀ ಪ್ರಮಾಣದ ಹಾನಿಯನ್ನುಂಟು ಮಾಡಿದೆ. ನಷ್ಟಗಳ ಹೊರತಾಗಿಯೂ, ಜೂನ್ನಲ್ಲಿ ಭುವನೇಶ್ವರದಲ್ಲಿ FIH ಪುರುಷರ ಸರಣಿ ಫೈನಲ್ಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಆ ವೇಳೆ, FIH ಸರಣಿ ಫೈನಲ್ಸ್ ಪಂದ್ಯಾವಳಿಯ ಟಿಕೆಟ್ ಮಾರಾಟದಿಂದ ಬಂದ ಮೊತ್ತವನ್ನು ಒರಿಸ್ಸಾ ಸಿಎಂ ರಿಲೀಫ್ ಫಂಡ್ಗೆ ದೇಣಿಗೆ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಹಣವನ್ನು ನೀಡಲಾಗಿದೆ.
ಮಂಗಳವಾರ ಬಿಡುಗಡೆಯಾದ ಸರ್ಕಾರದ ಮೌಲ್ಯಮಾಪನ ವರದಿಯ ಪ್ರಕಾರ, ಒರಿಸ್ಸಾಗೆ ಫೋನಿ ಚಂಡಮಾರುತದಿಂದಾಗಿ 24,176 ಕೋಟಿ ರೂ.ಗಳ ನಷ್ಟವಾಗಿದೆ ಮತ್ತು ಭಾರೀ ಪ್ರಮಾಣದಲ್ಲಿ ಮೂಲಸೌಕರ್ಯ ವಲಯಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಸಿಎಂ ನವೀನ್ ಪಟ್ನಾಯಕ್ ಅವರು ಚಂಡಮಾರುತದಿಂದಾದ ಹಾನಿ, ನಷ್ಟ ಮತ್ತು ಅಗತ್ಯ ಮೌಲ್ಯಮಾಪನ ವರದಿಯನ್ನು ಭಾರತದಲ್ಲಿನ ವಿಶ್ವಸಂಸ್ಥೆಯ ಸಂಯೋಜಕರಾದ ರೆನಾಟಾ ಲೋಕ್-ಡೆಸ್ಸಾಲಿಯನ್, ವಿಶ್ವ ಬ್ಯಾಂಕ್ ಪ್ರತಿನಿಧಿ, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ ಪ್ರತಿನಿಧಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.