ಬೆಂಗಳೂರು : ಮಹಾಮಳೆಗೆ ಮುಕ್ಕಾಲು ಭಾಗ ಕರ್ನಾಟಕ ತತ್ತರಿಸಿ ಹೋಗಿದೆ. 15 ಜಿಲ್ಲೆಗಳಲ್ಲಿ ನೆರೆ ಸಂಭವಿಸಿದೆ. ಬೆಳಗಾವಿ, ದಕ್ಷಿಣಕನ್ನಡ, ಕೊಡಗು, ಬಾಗಲಕೋಟೆ, ಉಡುಪಿ, ಕಾರವಾರ, ಶಿರಸಿ, ಉತ್ತರ ಕನ್ನಡ ನೆರೆ ಪರಿಸ್ಥಿತಿಯನ್ನು ಎದುರಿಸುತ್ತಿವೆ.
ನೆರೆಯಿಂದಾಗಿ 11ಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಅನೇಕ ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನಲೆಯಲ್ಲಿ 237 ಗ್ರಾಮಗಳು, 32 ತಾಲೂಕುಗಳು ಅಪಾಯಕ್ಕೆ ಸಿಲುಕಿವೆ. ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪನವರು ವೈಮಾನಿಕ ಸಮೀಕ್ಷೆಯನ್ನು ನಡೆಸಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಕೃಷ್ಣೆ ಉಕ್ಕಿ ಹರಿಯುತ್ತಿರುವುದರಿಂದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರುಗಳು ಅಪಾಯವನ್ನು ಎದುರಿಸುತ್ತಿವೆ. ರಸ್ತೆ ಸಂಪರ್ಕಗಳು ಕಡಿದು ಹೋಗಿವೆ.
ಶಿವಮೊಗ್ಗದ ಹಲವು ನಗರಗಳು ಜಲಾವೃತಗೊಂಡಿದೆ. ಜೋಗ ಜಲಪಾತದದ ತುಸು ದೂರದಲ್ಲಿರುವ ಐತಿಹಾಸಿಕ ಬ್ರಿಟಿಷ್ ಬಂಗಲೆ ಕುಸಿಯೋ ಭೀತಿ. ಶರಾವತಿ ಉಕ್ಕಿ ಹರಿಯುತ್ತಿದೆ.
ನೆರೆ ಸಂತ್ರಸ್ಥರ ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ಸಾಗಿದ್ದು, ವಿಪತ್ತು ನಿರ್ವಹಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಜನರಿಗೆ ಶಾಲೆ, ಗಂಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುತ್ತಿದೆ.
ನೆರೆಯಿಂದ ಮನೆ-ಮಠ ಕಳೆದುಕೊಂಡು ಸಂತ್ರಸ್ಥರಾದವರಿಗೆ ಅಗತ್ಯ ವಸ್ತುಗಳ ಅಗತ್ಯವಿದೆ. ಉಡುಪುಗಳು, ಆಹಾರ ವಸ್ತುಗಳು, ಹೊದಿಕೆ ಮುಂತಾದ ವಸ್ತುಗಳನ್ನು ಈ ಮೂಲಕ ಒದಗಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.