ರಾಂಚಿ: ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಜಾರ್ಖಂಡ್ ಸರಕಾರದ ಸ್ವಚ್ಛ ಭಾರತ ಅಭಿಯಾನದ ಸ್ಟಾರ್ ರಾಯಭಾರಿಯಾಗುವುದಕ್ಕೆ ನಿರಾಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗಾಗಲೇ ಅರಣ್ಯ ಮತ್ತು ಪರಿಸರ, ಪಲ್ಸ್ ಪೋಲಿಯೊ ಹಾಗೂ ಸಾಕ್ಷರತೆ ಅಭಿಯಾನಗಳನ್ನು ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ. ಇವುಗಳ ನೀರಸ ನಿರ್ವಹಣೆ ಬಗ್ಗೆ ಅಸಮಾಧಾನಗೊಂಡಿರುವ ಧೋನಿ ಸ್ವಚ್ಛ ಭಾರತ ಅಭಿಯಾನ ರಾಯಭಾರ ನಿರಾಕರಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಧೋನಿ ಅವರನ್ನು ಭೇಟಿ ಮಾಡಿ ಸ್ವಚ್ಛ ಭಾರತ ರಾಯಭಾರದ ಆಫರ್ ನೀಡಿದೆ. ಆದರೆ ದೋನಿಯಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವಿಭಾಗದ ಪ್ರಧಾನ ಕಾರ್ಯದರ್ಶಿ ಅಮರೇಂದ್ರ ಪ್ರತಾಪ್ ಸಿಂಗ್ ಹೇಳಿದ್ದಾರೆ.
ಜಾರ್ಖಂಡ್ ಸರ್ಕಾರದ ನೀರಸ ನಿರ್ವಹಣೆಯಿಂದಾಗಿ ಸರ್ಕಾರದ ಯಾವುದೇ ಪ್ರಚಾರ ಅಭಿಯಾನಗಳಿಗೆ ಬೆಂಬಲಿಸಲು ಧೋನಿ ನಿರಾಕರಿಸಿದ್ದಾರೆ. ಜಾರ್ಖಂಡ್ನ ಮಾಜಿ ಉಪಮುಖ್ಯಮಂತ್ರಿ ಸುಧೇಶ್ ಮಹತೋ ಅವರು ಈ ಯೋಜನೆರಗೆ ಅನುಮೋದನೆ ನೀಡಿದ್ದರೂ ಅದರಲ್ಲಿ ಸದ್ಯ ಯಾವುದೇ ಪ್ರಗತಿ ಕಾರ್ಯ ನಡೆದಿಲ್ಲ ಎನ್ನಲಾಗಿದೆ.
ಕ್ರಿಕೆಟ್ನಿಂದ ಸ್ವಲ್ಪ ಕಾಲ ವಿಶ್ರಾಂತಿ ಪಡೆಯುತ್ತಿರುವ ಧೋನಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.