ಬೆಳಗಾವಿ: ಬೆಳಗಾವಿ ಜಿಲ್ಲಾ ತಂಡವನ್ನು ಸೇರಿಕೊಳ್ಳುವ ಸಲುವಾಗಿ ಆಗಸ್ಟ್ 7 ರಂದು ಕರ್ನಾಟಕದ ಮನ್ನೂರು ಗ್ರಾಮದ ಬಾಕ್ಸರ್ ಒಬ್ಬರು ರೈಲು ಹಿಡಿಯಲು 2.5 ಕಿ.ಮೀ ಪ್ರವಾಹದ ನೀರಿನಲ್ಲಿ ಈಜಿದ್ದಾರೆ. 19 ವರ್ಷದ ನಿಶಾನ್ ಮನೋಹರ್ ಕದಮ್ ಈ ಸಾಹಸವನ್ನು ಮಾಡಿದ್ದು, ಪ್ರಸ್ತುತ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.
ಕರ್ನಾಟಕದಲ್ಲಿ ಸಂಭವಿಸಿದ ಪ್ರವಾಹವು 40 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಒಟ್ಟು 14 ಜನರು ಕಾಣೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ಭಾರೀ ಮುಂಗಾರು ಮಳೆಯಿಂದಾಗಿ ರಾಜ್ಯದ ಅನೇಕ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿ, 5.81 ಲಕ್ಷ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಅದರಲ್ಲಿ ಸುಮಾರು 3.45 ಲಕ್ಷ ಜನರು ಬೆಳಗಾವಿ ಜಿಲ್ಲೆಯವರಾಗಿದ್ದಾರೆ.
ಕದಮ್ ಮತ್ತು ಅವರ ಕುಟುಂಬ ಕೂಡ ಪ್ರವಾಹದಿಂದ ಹಾನಿಗೊಳಗಾಗಿದೆ. ಅವರ ಹಳ್ಳಿಯಲ್ಲಿ ಭಾರಿ ಪ್ರವಾಹ ಸಂಭವಿಸಿದ್ದು, ರಸ್ತೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲೇ ಬೇಕು ಎಂಬ ದೃಢ ನಿರ್ಧಾರ ಮಾಡಿದ್ದ 12 ನೇ ತರಗತಿ ವಿದ್ಯಾರ್ಥಿ ಕದಮ್ ಕೊನೆಗೂ ಪ್ರವಾಹದಲ್ಲಿ 2.5 ಕಿಮೀ ಈಜಿಕೊಂಡು ಹೋಗಿ ರೈಲು ಹತ್ತಿ ತಮ್ಮ ತಂಡವನ್ನು ಸೇರಿದ್ದಾರೆ. 45 ನಿಮಿಷಗಳಲ್ಲಿ 2.5 ಕಿ.ಮೀ ದೂರ ಅವರು ಈಜಿದ್ದಾರೆ.
ಈ ಬಾರಿ ಬಂಗಾರದ ಪದಕ ಗೆಲ್ಲಲು ಸಾಧ್ಯವಿಲ್ಲ, ಮುಂದಿನ ಸಲ ಖಂಡಿತವಾಗಿಯೂ ಬಂಗಾರ ಗೆಲ್ಲುತ್ತೇನೆ ಎಂದು ಕದಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.