ನವದೆಹಲಿ: ಭಾರತವನ್ನು ಏಕ-ಬಳಕೆಯ ಪ್ಲಾಸ್ಟಿಕ್ಗಳಿಂದ ಮುಕ್ತಗೊಳಿಸುವಂತೆ 73 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದರು, ಈ ಕರೆಗೆ ಪ್ರತಿಕ್ರಿಯೆಯಾಗಿ ಎಲ್ಲರನ್ನೂ ಒಳಗೊಂಡ ಬೃಹತ್ ಸಾರ್ವಜನಿಕ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
BRICS ಮತ್ತು BASIC ರಾಷ್ಟ್ರಗಳ ಸಚಿವ ಸಭೆಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಬ್ರೆಜಝಿಲ್ ದೇಶದ ಸಾವೊಗೆ ತೆರಳಿರುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಅಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗಿಯಾದರು. ಈ ವೇಳೆ, ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಆಂದೋಲನ ನಡೆಸಲಾಗುವುದು ಎಂದು ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಭಾರತವನ್ನು ಏಕ ಬಳಕೆ ಪ್ಲಾಸ್ಟಿಕ್ಗಳಿಂದ ಮುಕ್ತಗೊಳಿಸುವಂತೆ ಮನವಿಯನ್ನು ಪುನರುಚ್ಛರಿಸಿದ್ದಾರೆ ಎಂದು ಹೇಳಿದ್ದಾರೆ.
“ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಅಂತಿಮ ಸಭೆಯನ್ನು ನಡೆಸಲಾಗುವುದು, ಆಂದೋಲನವನ್ನು ಜನರ ಅಭಿಯಾನವಾಗಿಸಲು ಒಂದು ದೃಢವಾದ ಯೋಜನೆಯನ್ನು ರೂಪಿಸುತ್ತೇವೆ “ಎಂದಿದ್ದಾರೆ.
ಇದಕ್ಕೂ ಮುನ್ನ, ಟ್ವೀಟ್ ಮಾಡಿದ್ದ ಸಚಿವರು, “ಭಾರತವನ್ನು ಏಕ-ಬಳಕೆಯ ಪ್ಲಾಸ್ಟಿಕ್ಗಳಿಂದ ಮುಕ್ತಗೊಳಿಸುವ ಅಭಿಯಾನಕ್ಕೆ ಪಿಎಂ ನರೇಂದ್ರ ಮೋದಿ ಇಂದು ಕರೆ ನೀಡಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ” ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.