ನವದೆಹಲಿ: ದೆಹಲಿಯಲ್ಲಿನ ತಮ್ಮ ಸರ್ಕಾರಿ ಬಂಗಲೆಗಳನ್ನು ಏಳು ದಿನಗಳೊಳಗೆ ಖಾಲಿ ಮಾಡುವಂತೆ ಎಲ್ಲಾ ಮಾಜಿ ಸಂಸದರಿಗೆ ಕೋರಲಾಗಿದೆ ಎಂದು ವಸತಿ ಸಮಿತಿಯ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಪಾಟೀಲ್, “ಎಲ್ಲಾ ಮಾಜಿ ಸಂಸದರಿಗೆ ಸರ್ಕಾರಿ ವಸತಿಗಳನ್ನು ಖಾಲಿ ಮಾಡಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ. ಮೂರು ದಿನಗಳೊಳಗೆ ಈ ವಸತಿಗಳಿಗೆ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನಿನ ಪ್ರಕಾರ, ಸಂಸದರು ಮರು ಆಯ್ಕೆ ಆಗದಿದ್ದರೆ ಅವರು 30 ದಿನಗಳಲ್ಲಿ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ. ಕನಿಷ್ಠ 50-60 ಮಾಜಿ ಸಂಸದರು ಇನ್ನೂ ತಮ್ಮ ಮನೆಗಳನ್ನು ಖಾಲಿ ಮಾಡಿಲ್ಲ” ಎಂದಿದ್ದಾರೆ.
16 ನೇ ಲೋಕಸಭೆ ವಿಸರ್ಜನೆಯಾದ ಸುಮಾರು ಮೂರು ತಿಂಗಳ ನಂತರ, ಹಲವಾರು ಶಾಸಕರು ಇನ್ನೂ ತಮ್ಮ ಅಧಿಕೃತ ಬಂಗಲೆಗಳನ್ನು ಖಾಲಿ ಮಾಡದೆ ಹಾಗೆಯೇ ಇಟ್ಟುಕೊಂಡಿದ್ದಾರೆ.
ನವದೆಹಲಿಯ ನಾರ್ತ್ ಅವೆನ್ಯೂದಲ್ಲಿ ಸೋಮವಾರ ಲೋಕಸಭಾ ಸಚಿವಾಲಯದ ಡ್ಯುಪ್ಲೆಕ್ಸ್ ಫ್ಲ್ಯಾಟ್ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ವಿಷಯದ ಪ್ರಸ್ತಾಪ ಮಾಡಿದ್ದರು. “ಸಂಸತ್ತಿನ ಹೊಸ ಅಧಿವೇಶನ ಪ್ರಾರಂಭವಾದಾಗ, ಹೊಸ ಸಂಸದರು ವಸತಿ ಸೌಕರ್ಯಗಳನ್ನು ಹುಡುಕುವಲ್ಲಿ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಯನ್ನು ನಿವಾರಿಸಲು ಪ್ರಯತ್ನಗಳು ನಡೆದಿವೆ ಎಂದು ನನಗೆ ಖುಷಿಯಾಗಿದೆ. ಕ್ಷೇತ್ರದ ಪ್ರತಿನಿಧಿಯಾಗಿರುವ ಸಂಸದನಿಗೆ ಹಲವು ಸೌಕರ್ಯಗಳು ಬೇಕಾಗುತ್ತದ ”ಎಂದು ಪ್ರಧಾನಿ ಮೋದಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.