ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅವರು ಸೋಮವಾರ ನವದೆಹಲಿಯಲ್ಲಿ “Journey of Teacher Education: Local to Global” ಎಂಬ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು.
1995 ರಲ್ಲಿ ಸ್ಥಾಪನೆಯಾದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್ಸಿಟಿಇ)ಯು ಬೆಳ್ಳಿ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಭಾರತ ಮತ್ತು ವಿದೇಶದ 40 ಹೆಸರಾಂತ ತಜ್ಞರು ಭಾರತೀಯ ಸನ್ನಿವೇಶದಲ್ಲಿ ಶಿಕ್ಷಕರ ಶಿಕ್ಷಣ, ಬೋಧನಾ ಅಭ್ಯಾಸಗಳಲ್ಲಿನ ಆವಿಷ್ಕಾರಗಳು, ಬೋಧನೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಏಕೀಕರಣ, ಅಧ್ಯಯನ-ಕಲಿಕೆಯ ಪರಿಸರದಲ್ಲಿ ಅಂತರ್ಗತ ಶಿಕ್ಷಣ ಮತ್ತು ಶಿಕ್ಷಕರ ಶಿಕ್ಷಣದ ಅಂತಾರಾಷ್ಟ್ರೀಕರಣ ಮುಂತಾದ ಕ್ಷೇತ್ರಗಳ ಬಗ್ಗೆ ಚರ್ಚಿಸುತ್ತಿದ್ದಾರೆ.
ಗೃಹ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ವಿಭಾಗದ ಕಾರ್ಯದರ್ಶಿ ಶ್ರೀಮತಿ ರೀನಾ ರೇ, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ, ನೀತಿ ಆಯೋಗದ ವಿಶೇಷ ಕಾರ್ಯದರ್ಶಿ ಯದುವೇಂದ್ರ ಮಾಥುರ್, ಎನ್ಸಿಟಿಇನ ಅಧ್ಯಕ್ಷ ಡಾ. ಸತ್ಬೀರ್ ಬೇಡಿ ಮತ್ತು ಎನ್ಸಿಟಿಇ ಸದಸ್ಯ ಕಾರ್ಯದರ್ಶಿ ಸಂಜಯ್ ಅವಸ್ಥಿ ಸೇರಿದಂತೆ ಹಲವಾರು ನೀತಿ ನಿರೂಪಕರು ಕಾನ್ಫರೆನ್ಸ್ನಲ್ಲಿ ತಮ್ಮ ವಿಚಾರಗಳನ್ನು ಮಂಡನೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನವ ಸಂಪನ್ಮೂಲ ಸಚಿವರು, ದೇಶದಾದ್ಯಂತದ 42 ಲಕ್ಷ ಶಿಕ್ಷಕರಿಗೆ ತರಬೇತಿಯನ್ನು ನೀಡುವ ಕಾರ್ಯಕ್ರಮವನ್ನು ಶೀಘ್ರದಲ್ಲೇ ಆಯೋಜನೆಗೊಳಿಸಲಾಗುವುದು ಎಂದು ತಿಳಿಸಿದರು.
“ಭಾರತ ಸಾಂಪ್ರದಾಯಿಕವಾಗಿ ಶಿಕ್ಷಣ ಮತ್ತು ಶಿಕ್ಷಕರ ತಯಾರಿಕೆಯಲ್ಲಿ ನಾಯಕತ್ವಕ್ಕೆ ಹೆಸರುವಾಸಿಯಾಗಿದೆ. ಸಾವಿರಾರು ವರ್ಷಗಳಿಂದ ‘ಭಾರತೀಯ ಶಿಕ್ಷಕ’ ರನ್ನು ವಿಶ್ವ ಗುರು (ವಿಶ್ವದ ಶಿಕ್ಷಕ) ಎಂದು ಪರಿಗಣಿಸಲಾಗಿತ್ತು. ಪ್ರಾಚೀನ ಭಾರತೀಯ ಶಿಕ್ಷಣ ವ್ಯವಸ್ಥೆಯ ಸಾಧನೆಗಳು ಲೆಜೆಂಡರಿಯಾಗಿವೆ. ಶಾಲಾ ಶಿಕ್ಷಣವು ಪ್ರಗತಿಪರ ರಾಷ್ಟ್ರದ ಅಡಿಪಾಯವಾಗಿದೆ ಮತ್ತು ಶಿಕ್ಷಕರು ಸಮಾಜದ ಶಕ್ತಿಯಾಗಿದ್ದು, ವಿದ್ಯಾರ್ಥಿಗಳನ್ನು ಭವಿಷ್ಯದ ಪ್ರಜೆಗಳನ್ನಾಗಿ ರೂಪಿಸುತ್ತಾರೆ ಮತ್ತು ಅವರಲ್ಲಿ ಸಕಾರಾತ್ಮಕ ಚಿಂತನೆ ಮತ್ತು ಸಾಂಸ್ಕೃತಿಕ ನೀತಿಗಳನ್ನು ಬೆಳೆಸುತ್ತಾರೆ. ಇದರಿಂದ ಅವರು ಸಮಾಜಕ್ಕೆ ಆಸ್ತಿಯಾಗಬಹುದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.