ನವದೆಹಲಿ: ಸೈಬರ್ ಮತ್ತು ಮಾಹಿತಿ ಸುರಕ್ಷತೆಯ ಉಲ್ಲಂಘನೆಗಳನ್ನು ತಪ್ಪಿಸುವ ಸಲುವಾಗಿ ಕಠಿಣ ಭದ್ರತಾ ನಿಯಮಾವಳಿಗಳನ್ನು ಅನುಸರಿಸುವಂತೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೋಮವಾರ ಸೇನಾ ಅಧಿಕಾರಿಗಳು ಮತ್ತು ಯೋಧರಿಗೆ ಸೂಚನೆಯನ್ನು ನೀಡಿದ್ದಾರೆ. ಮಿಲಿಟರಿ ವಸತಿ ಯೋಜನೆಗಳಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆಯೂ ಅವರು ಎಚ್ಚರಿಕೆ ನೀಡಿದ್ದಾರೆ.
ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜನರಲ್ ರಾವತ್, ಮಿಲಿಟರಿ ವಸತಿ ಯೋಜನೆಗಳಲ್ಲಿ ಹಲವಾರು ಭ್ರಷ್ಟಾಚಾರ ಪ್ರಕರಣಗಳು ಹೊರಬಂದಿವೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ
ಸೈಬರ್ ಮತ್ತು ಮಾಹಿತಿ ಸುರಕ್ಷತೆಯ ವಿಷಯದಲ್ಲಿ, ಗಂಭೀರ ಉಲ್ಲಂಘನೆಯ ಕೆಲವು ಪ್ರಕರಣಗಳು ಇತ್ತೀಚೆಗೆ ಹೊರಬಂದಿವೆ ಎಂದು ಜನರಲ್ ರಾವತ್ ಅವರು ಹೇಳಿದ್ದಾರೆ.
ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಜೂನ್ನಲ್ಲಿ ಭಾರತೀಯ ಸೇನೆಯು ಲೆಫ್ಟಿನೆಂಟ್ ಜನರಲ್ ಒಬ್ಬರನ್ನು ಶಿಕ್ಷಿಸಿತ್ತು. ಜನರಲ್ ರಾವತ್ ಅವರು ಭಾರತೀಯ ಸೇನೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸ್ಪಷ್ಟವಾದ ಸಂದೇಶಗಳನ್ನು ನೀಡುತ್ತಾ ಬರುತ್ತಿದ್ದು, ಸೇನೆಯಲ್ಲಿನ ನೈತಿಕ ತಲ್ಲಣ ಮತ್ತು ಆರ್ಥಿಕ ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.