ಬೆಂಗಳೂರು: ಏಕ-ಬಳಕೆಯ ಪ್ಲಾಸ್ಟಿಕ್ಗಳ ನಿಷೇಧ ಕ್ರಮವನ್ನು ಜಾರಿಗೆ ತರುವ ಹಿನ್ನಲೆಯಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಿವಿಧ ಅಂಗಡಿಗಳಿಂದ ಸಾಕಷ್ಟು ಪ್ರಮಾಣ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡಿದೆ. ಅಲ್ಲದೇ, ವಶಪಡಿಸಿಕೊಂಡ ಈ ಪ್ಲಾಸ್ಟಿಕ್ಗಳನ್ನು ಉಪಯುಕ್ತವಾದ ರೀತಿಯಲ್ಲಿ ಬಳಕೆಯಾಗಲಿವೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ರಸ್ತೆಗಳನ್ನು ನಿರ್ಮಾಣ ಮಾಡುವ ವೇಳೆ ಈ ಪ್ಲಾಸ್ಟಿಕ್ಗಳನ್ನು ಬಳಸಲು ಮುಂದಾಗಿದೆ.
ವಿಮಾನನಿಲ್ದಾಣದಲ್ಲಿ ಪ್ರಸ್ತುತ ವಿಸ್ತರಣಾ ಕಾಮಗಾರಿಗಳು ನಡೆಯುತ್ತಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಶಪಡಿಸಿಕೊಂಡ ಪ್ಲಾಸ್ಟಿಕ್ಗಳನ್ನು ರಸ್ತೆಗಳಿಗೆ ಬಳಸಿಕೊಳ್ಳಲು ಇದು ನಿರ್ಧರಿಸಿದೆ. ಸೋಮವಾರ ಸಂಜೆ 4 ಗಂಟೆಗೆ ಔಪಚಾರಿಕವಾಗಿ ಪ್ಲಾಸ್ಟಿಕ್ ಹಸ್ತಾಂತರ ಕಾರ್ಯಕ್ರಮವು ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ. ಅಲ್ಲದೇ, ಈ ಸಂದರ್ಭದಲ್ಲಿ ಬಿಬಿಎಂಪಿ ಆಯುಕ್ತ ಬಿ.ಎಚ್ ಅನಿಲ್ ಕುಮಾರ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಉಪ ಮುಖ್ಯ ಯೋಜನಾಧಿಕಾರಿ ರಾಜು ಕವಾಲ್ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶೇಷ ಯೋಜನೆಗಳ ಉಪಾಧ್ಯಕ್ಷ ಸುಂದರ್ ಚಂದ್ರಮೌಳಿ ಅವರ ನಡುವೆ ಸಭೆಯೂ ನಡೆಯಲಿದೆ.
ವಶಪಡಿಸಿಕೊಂಡ ಎರಡು ಟನ್ಗಿಂತಲೂ ಹೆಚ್ಚು ಪ್ಲಾಸ್ಟಿಕ್ಗಳನ್ನು ಒಳಗೊಂಡ ಎರಡು ಟ್ರಕ್ಗಳನ್ನು ಕಾರ್ಯಕ್ರಮದ ನಂತರ ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡೊಯ್ಯಲಾಗುತ್ತಿದೆ. ವಶಪಡಿಸಿಕೊಂಡ ಪ್ಲಾಸ್ಟಿಕ್ಗಳು ಪರಿಸರಕ್ಕೆ ಹಿಂತಿರುಗದಂತೆ ನೋಡಿಕೊಳ್ಳಲು ಇದು ಒಂದು ಉತ್ತಮ ಮಾರ್ಗವಾಗಿದೆ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಇದನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆಗಳ ನಿರ್ಮಾಣದ ವೇಲೆ ಪ್ಲಾಸ್ಟಿಕ್ಗಳನ್ನು ಬಳಕೆ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಜ್ಞರು ದೀರ್ಘಕಾಲದಿಂದಲೂ ಪ್ರತಿಪಾದಿಸುತ್ತಾ ಬಂದಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ನೀರಿನಿಂದ ಉಂಟಾಗುವ ಹಾನಿಯಿಂದ ರಸ್ತೆಯನ್ನು ಕಾಪಾಡಬಹುದು ಮತ್ತು ವೆಚ್ಚವನ್ನೂ ಕಡಿಮೆ ಮಾಡುತ್ತದೆ ಎಂದು ಪರಿಗಣಿಸಲಾಗಿದೆ.
2019 ರ ಜನವರಿಯಿಂದ ಬಿಬಿಎಂಪಿ ಸುಮಾರು 4,000 ಕೆಜಿ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡಿದೆ.
ಸೆಪ್ಟೆಂಬರ್ 1 ರಿಂದ, ‘ಘನ ತ್ಯಾಜ್ಯ ನಿರ್ವಹಣೆ 2019’ ರ ಕಟ್ಟುನಿಟ್ಟಿನ ನಿಯಮಗಳ ಅಡಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಬಿಬಿಎಂಪಿ ನಿಷೇಧಿಸಲಿದೆ. ಈ ನಿಯಮಗಳ ಪ್ರಕಾರ, ನಿಯಮ ಉಲ್ಲಂಘಿಸಿದ ವ್ಯಾಪಾರಿಗಳ ಪರವಾನಗಿಯನ್ನು ಅಮಾನತುಗೊಳಿಸಬಹುದಾಗಿದೆ ಅಥವಾ ಪುನರಾವರ್ತಿತ ಉಲ್ಲಂಘನೆಗಾಗಿ ಅಂಗಡಿಗಳನ್ನು ಮುಚ್ಚಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.