ನವದೆಹಲಿ: ಜನಸಂಘದ ಸಂಸ್ಥಾಪಕ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನವನ್ನು ಇಂದು ದೇಶದಲ್ಲಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮುಖರ್ಜಿ ಅವರಿಗೆ ನಮನಗಳನ್ನು ಸಲ್ಲಿಸಿದರು.
‘ಇಂದು ನಾವು ಶ್ಯಾಮ್ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ಸಲ್ಲಿಕೆ ಮಾಡುತ್ತಿದ್ದೇವೆ. ದೇಶಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ ಮಹಾನ್ ನಾಯಕನಾಗಿ ಅವರನ್ನು ನಾವು ನೆನಪಿಸುತ್ತೇವೆ. ಯುವಕರ ಶಿಕ್ಷಣಕ್ಕೆ ಅವರು ಹೆಚ್ಚಿನ ಆದ್ಯತೆ ನೀಡಿದರು, ಅವರೊಬ್ಬ ಸ್ಟೇಟ್ಸ್ಮ್ಯಾನ್, ದೂರದೃಷ್ಟಿತ್ವ ಹೊಂದಿದ್ದ ಮಹಾನ್ ಚಿಂತಕ. ಅವರ ಸಿದ್ಧಾಂತಗಳಿಗೆ ಜನ ಮನ್ನಣೆ ಸಿಕ್ಕಿದೆ’ ಎಂದು ಟ್ವೀಟರ್ ಮೂಲಕ ಮೋದಿ ಮುಖರ್ಜಿ ಬಗೆಗಿನ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಕೋಲ್ಕತ್ತಾದಲ್ಲಿ 1901ರ ಜುಲೈ 6ರಂದು ಜನಿಸಿದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜವಹಾರ್ ಲಾಲ್ ನೆಹರೂ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕಾಂಗ್ರೆಸ್ನ್ನು ತೊರೆದು ಜನಸಂಘವನ್ನು ಸ್ಥಾಪನೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.