ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ನವದೆಹಲಿಯಲ್ಲಿ 46 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಅನನ್ಯ ಕೊಡುಗೆಯನ್ನು ನೀಡಿದ, ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಿದ ಮತ್ತು ವಿದ್ಯಾರ್ಥಿಗಳ ಜೀವನವನ್ನು ಸಮೃದ್ಧಗೊಳಿಸಿದ ಶಿಕ್ಷಕರನ್ನು ಗೌರವಿಸಲು ಶಿಕ್ಷಕರ ದಿನದಂದು ಶ್ರೇಷ್ಠ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್ ಅವರು, “ಶಾಲೆಗಳಲ್ಲಿ ವ್ಯಕ್ತಿತ್ವ ನಿರ್ಮಾಣದ ಅಡಿಪಾಯವನ್ನು ಹಾಕಲಾಗುತ್ತದೆ ಮತ್ತು ಯುವ ಮನಸ್ಸುಗಳಲ್ಲಿ ನೈತಿಕ ಸ್ವಭಾವವನ್ನು ಬೆಳೆಸುವಲ್ಲಿ ಶಿಕ್ಷಕರು ಹೆಚ್ಚು ಜವಾಬ್ದಾರರಾಗಿರುತ್ತಾರೆ. ಶಿಕ್ಷಕರು ತಮ್ಮ ಮೂಲಭೂತ ಜವಾಬ್ದಾರಿಗಳನ್ನು ಅರ್ಥಮಾಡಿಕೊಂಡು ಸೇವೆ ಸಲ್ಲಿಸಬೇಕು ಎಂದರು.
ಪ್ರಾಮಾಣಿಕತೆ, ಶಿಸ್ತು ಮತ್ತು ಸಮಗ್ರತೆಯಂತಹ ಮೌಲ್ಯಗಳು ಶಿಕ್ಷಕರಿಂದಾಗಿ ಯುವ ಮನಸ್ಸಿನಲ್ಲಿ ತುಂಬಿವೆ ಎಂದರು.
ರಾಷ್ಟ್ರಪತಿ ಕೋವಿಂದ್ ಮಾತನಾಡಿ, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಒಬ್ಬ ಮಹಾನ್ ತತ್ವಜ್ಞಾನಿ, ರಾಜಕಾರಣಿ ಮತ್ತು ಬರಹಗಾರ ಮಾತ್ರವಲ್ಲದೆ ಅಸಾಧಾರಣ ಶಿಕ್ಷಕರಾಗಿದ್ದರು.
ಭಾರತದಲ್ಲಿ, ಸೆಪ್ಟೆಂಬರ್ 5, 1888 ರಂದು ಜನಿಸಿದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಗೌರವಾರ್ಥವಾಗಿ ಶಿಕ್ಷಕರ ದಿನವನ್ನು ಸೆಪ್ಟೆಂಬರ್ 5 ರಂದು ಆಚರಿಸಲಾಗುತ್ತದೆ.
President Kovind addresses the teachers on the occasion of #TeachersDay https://t.co/nnn792zBge
— President of India (@rashtrapatibhvn) September 5, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.