ಮಡಿಕೇರಿ: ಅಕ್ಟೋಬರ್ 13 ರಿಂದ 18 ರವರೆಗೆ ಮಡಿಕೇರಿಯಲ್ಲಿ ಸೇನಾ ನೇಮಕಾತಿ ಸಮಾವೇಶ ಜರಗುತ್ತಿದೆ. ಭಾರತೀಯ ಸೇನೆಯನ್ನು ಸೇರಿ ಆ ಮೂಲಕ ದೇಶ ಸೇವೆ ಮಾಡುವ ಆಶಯವನ್ನು ಹೊಂದಿರುವ ಯುವಕರು ಈ ಸಮಾವೇಶದಲ್ಲಿ ಪಾಲ್ಗೊಂಡು ಸೇನೆ ಸೇರುವ ಅವಕಾಶವನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
ದೇಶದ ಹಲವು ಭಾಗಗಳಲ್ಲಿ ಸೇನಾ ನೇಮಕಾತಿ ಸಮಾವೇಶಗಳು ಜರುಗುತ್ತಿವೆ. ಅದರ ಭಾಗವಾಗಿ ಮಡಿಕೇರಿಯಲ್ಲೂ ಇದು ಜರಗುತ್ತಿದೆ. ಹೆಚ್ಚು ಹೆಚ್ಚು ಯುವಕರನ್ನು ಸೇನೆ ಸೇರಲು ಪ್ರೇರೇಪಿಸುವುದು ಮತ್ತು ಅವಕಾಶಗಳನ್ನು ನೀಡುವುದು ಇದರ ಉದ್ದೇಶವಾಗಿದೆ.
ಮಡಿಕೇರಿಯಲ್ಲಿ ನಡೆಯಲಿರುವ ಸೇನಾ ನೇಮಕಾತಿ ಸಮಾವೇಶದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿತ್ರದುರ್ಗ, ಹಾಸನ, ಚಿಕ್ಕಬಳ್ಳಾಪುರ ಮುಂತಾದ ಪ್ರದೇಶಗಳ ಯುವಕರು ಪಾಲ್ಗೊಳ್ಳಬಹುದಾಗಿದೆ. ಪಾಲ್ಗೊಳ್ಳುವುದಕ್ಕೂ ಮುನ್ನ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಸೆ.9 ರಿಂದ 29 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನೇಮಕಾತಿ ಜರುಗಲಿದೆ. www.joinindianarmy.nic in ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಿದೆ. 080-25596517ಗೆ ಕರೆ ಮಾಡಿ ಹೆಚ್ಚಿನ ಮಿಹಿತಿ ಪಡೆದುಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.