ನವದೆಹಲಿ: ದೇಶದ ಹಲವಾರು ಕುಖ್ಯಾತ ಪ್ರಕರಣಗಳನ್ನು ತನಿಖೆಗೊಳಪಡಿಸುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಬಲವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದೆ. ಕೇಂದ್ರೀಕೃತ ತಂತ್ರಜ್ಞಾನ ವ್ಯವಸ್ಥೆ(ಸಿಟಿವಿ)ಯನ್ನು ಅಳವಡಿಸಲು ನಿರ್ಧರಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಪಿಂಚಣಿ ಸಚಿವ ಜಿತೇಂದ್ರ ಸಿಂಗ್ ಅವರು, ಸಿಟಿವಿ ತಂತ್ರ ಜ್ಞಾನವನ್ನು ಅಳವಡಿಸುವುದರಿಂದ 2 ಜಿ ಪ್ರಕರಣ, ಕಲ್ಲಿದ್ದಲು ಹಗರಣ, ಶಾರದಾ ಚಿಟ್ ಫಂಡ್ ಹಗರಣ, ಐಎಂಎನಂತಹ ವಂಚನೆ ಪ್ರಕರಣಗಳ ಆಳ ಅಗಲವನ್ನು ಬೇಧಿಸಲು ಸಿಬಿಐಗೆ ಸಹಾಯವಾಗಲಿದೆ ಎಂದಿದ್ದಾರೆ.
ಭ್ರಷ್ಟಚಾರ ಆರೋಪಿಗಳ ನಿಖರವಾದ ಮಾಹಿತಿಯನ್ನು ಹೊರ ಹಾಕಲು ಈ ತಂತ್ರಜ್ಞಾನ ಸಹಕಾರಿಯಾಗಲಿದೆ. ಕಪ್ಪುಹಣ ತಡೆಗಟ್ಟುವಲ್ಲಿಯೂ ಪರಿಣಾಮಕಾರಿಯಾಗಲಿದೆ ಎಂದಿದ್ದಾರೆ.
ಸಿಬಿಐ ಮಾಜಿ ನಿರ್ದೇಶಕ ಅನಿಲ್ ಸಿನ್ಹಾ ಅವರು 2015ರಲ್ಲೇ ಸಿಟಿಐ ತಂತ್ರಜ್ಞಾನ ಅಳವಡಿಸುವ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದರು. ಇದೀಗ ನರೇಂದ್ರ ಮೋದಿ ಸರ್ಕಾರ ಆ ಪ್ರಸ್ತಾಪವನ್ನು ಅನುಷ್ಠಾನಕ್ಕೆ ತರುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.