News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಖ್ಯಾತ ವಕೀಲ ರಾಮ್ ಜೇಠ್ಮಲಾನಿ ನಿಧನಕ್ಕೆ ಗಣ್ಯರ ಸಂತಾಪ

ನವದೆಹಲಿ: ಭಾರತದ ಖ್ಯಾತ ವಕೀಲರ ಪೈಕಿ ಒಬ್ಬರಾದ ಮತ್ತು ಮಾಜಿ ಕೇಂದ್ರ ಸಚಿವರಾದ ರಾಮ್ ಜೇಠ್ಮಲಾನಿ ಅವರು ಇಂದು ದೆಹಲಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಜೇಠ್ಮಲಾನಿ ಅವರು, ಇಂದು ಬೆಳಿಗ್ಗೆ 7.45ರ ಸುಮಾರಿಗೆ ನಿಧನರಾದರು ಎಂದು ಅವರ ಪುತ್ರ ಮಹೇಶ್ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ಲೋಧಿ ರಸ್ತೆಯ ಚಿತಾಗಾರದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.

ಜೇಠ್ಮಲಾನಿ ಅವರು ಆರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. 1997ರಲ್ಲಿ ಅವರು ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು. 2000ದಲ್ಲಿ ಅವರು ವಾಜಪೇಯಿ ಸರ್ಕಾರವನ್ನು ತೊರೆದಿದ್ದರು.

ಪ್ರತಿಷ್ಠಿತ ವಕೀಲರಾಗಿದ್ದ ಅವರು ಹಲವಾರು ಹೈಪ್ರೊಫೈಲ್ ಪ್ರಕರಣಗಳನ್ನು ನಿಭಾಯಿಸಿದ್ದಾರೆ. ಎಲ್ ಕೆ ಅಡ್ವಾಣಿ, ಲಾಲು ಪ್ರಸಾದ್ ಯಾದವ್, ಜೆ ಜಯಲಲಿತಾ, ಅರವಿಂದ್ ಕೇಜ್ರಿವಾಲ್ ಮುಂತಾದ ಹಲವಾರು ರಾಜಕೀಯ ನಾಯಕರುಗಳ ಪರ ಅವರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಜೇಠ್ಮಲಾನಿ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದು, ” ಭಾರತವು ಅಪರೂಪದ ವಕೀಲನನ್ನು ಮತ್ತು ಪ್ರತಿಷ್ಠಿತ ಸಾರ್ವಜನಿಕ ವ್ಯಕ್ತಿಯನ್ನು ಕಳೆದುಕೊಂಡಿದೆ. ನ್ಯಾಯಾಲಯ ಮತ್ತು ಸಂಸತ್ತು ಎರಡರಲ್ಲೂ ಅವರು ದೇಶಕ್ಕೆ ಕೊಡುಗೆ ನೀಡಿದ್ದಾರೆ. ಅವರು ಅತ್ಯಂತ ಧೈರ್ಯಶಾಲಿ ಮತ್ತು ನಿಷ್ಟುರವಾದಿಯಾಗಿದ್ದು ಯಾವುದೇ ವಿಷಯದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುವಲ್ಲಿ ಅವರು ಹಿಂಜರಿಯುತ್ತಿರಲಿಲ್ಲ” ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಜೇಠ್ಮಲಾನಿ ಅವರ ಮನೆಗೆ ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top