ನೊಯ್ಡಾ: ಮುಂಬರುವ ದಿನಗಳಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನನ್ನ ಸರಕಾರವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿಯವರು ಗ್ರೇಟರ್ ನೋಯ್ಡಾದಲ್ಲಿ ನಡೆದ ವಿಶ್ವಸಂಸ್ಥೆಯ ಕನ್ವೆನ್ಷನ್ನಲ್ಲಿ ಹೇಳಿದ್ದಾರೆ.
“ಸಣ್ಣ ನೀರಾವರಿ ಮತ್ತು ಭೂ ಸಂರಕ್ಷಣೆ ಮುಂತಾದ ಕಾರ್ಯಕ್ರಮಗಳ ಮೂಲಕ ಇಳುವರಿಯನ್ನು ಹೆಚ್ಚಿಸುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಲು ಮುಂದಾಗುತ್ತೇವೆ” ಎಂದಿದ್ದಾರೆ.
ಹವಾಮಾನ ವೈಪರೀತ್ಯದಿಂದ ಜೀವವೈವಿಧ್ಯತೆಯ ಮೇಲೆ ಮತ್ತು ಭೂಮಿಯ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಒತ್ತಿ ಹೇಳಿದ ಅವರು, ಹವಾಮಾನ ವೈಪರೀತ್ಯವು ಭೂಸವೆತದಂತಹ ಹಲವಾರು ದುಷ್ಪರಿಣಾಮಗಳಿಗೆ ಕಾರಣವಾಗುತ್ತಿದೆ. ಸಮುದ್ರ ಮಟ್ಟವನ್ನು ಹೆಚ್ಚಿಸುತ್ತಿದೆ, ಅಸಮರ್ಪಕ ಮಳೆ, ಚಂಡಮಾರುತಗಳನ್ನು ಸೃಷ್ಟಿಸುತ್ತಿದೆ. ಉಷ್ಣಾಂಶ ಏರುವಂತೆ ಮಾಡುತ್ತಿದೆ ಎಂದಿದ್ದಾರೆ. ಭಾರತದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರುತ್ತಿದ್ದೇವೆ. ವಿಶ್ವವೂ ಕೂಡಾ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡಬೇಕು ಎಂದಿದ್ದಾರೆ.
ಭಾರತ ಈಗ ಮೂರು ವಿಶ್ವಸಂಸ್ಥೆಯ ಕನ್ವೆನ್ಷನ್ಗಳನ್ನು ಆಯೋಜನೆಗೊಳಿಸಿದೆ ಎಂದ ಮೋದಿ, ಹವಾಮಾನ ವೈಪರೀತ್ಯ ಮತ್ತು ಜೀವವೈವಿಧ್ಯ ಮತ್ತು ಭೂಸವೆತದಂತಹ ಸಮಸ್ಯೆಗಳ ವಿರುದ್ಧ ಭವಿಷ್ಯದಲ್ಲಿ ಉನ್ನತ ಸಹಕಾರದೊಂದಿಗೆ ಕಾರ್ಯನಿರ್ವಹಿಸಲು ಭಾರತ ಬಯಸುತ್ತಿದೆ ಎಂದಿದ್ದಾರೆ.
ಜಗತ್ತು ಎದುರಿಸುತ್ತಿರುವ ನೀರಿನ ಸಮಸ್ಯೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಸಮರ್ಪಕ ನೀರಿನ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಭಾರತದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.