News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಮಲ್‌ನಾಥ್ ವಿರುದ್ಧದ ಸಿಖ್ ವಿರೋಧಿ ದಂಗೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ನಿರ್ಧಾರ

ನವದೆಹಲಿ: ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್­ನಾಥ್ ಅವರು ಆರೋಪಿಯಾಗಿರುವ 1984ರ ಸಿಖ್ ದಂಗೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

1984ರ ಸಿಖ್ ದಂಗೆ ಸಂದರ್ಭದಲ್ಲಿ ಕಮಲ್­ನಾಥ್ ಅವರು ದೆಹಲಿಯ ರಕಬ್ಗಂಜ್ ಗುರುದ್ವಾರದ ಸಮೀಪ ಉದ್ರಿಕ್ತ ಗುಂಪನ್ನು ಪ್ರಚೋದಿಸಿದ್ದರು ಎಂಬ ಆರೋಪವಿದೆ. ಈ ಪ್ರಕರಣದ ತನಿಖೆಯನ್ನು ಮರು ತನಿಖೆಗೊಳಪಡಿಸಲು ಇದೀಗ ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

ಮೂಲಗಳ ಪ್ರಕಾರ ಸೋಮವಾರ ಕಮಲ್­ನಾಥ್ ವಿರುದ್ಧದ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ಕೇಂದ್ರ ಗೃಹ ಸಚಿವಾಲಯ ಹಸಿರು ನಿಶಾನೆ ತೋರಿಸಿದೆ.

1984 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ಬಳಿಕ ದೇಶವ್ಯಾಪಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಹಿಂಸಾಚಾರವನ್ನು ನಡೆಸಿದ್ದರು. ಇದರಿಂದಾಗಿ ಹಲವಾರು ಮಂದಿ ಸಿಖ್ ಸಮುದಾಯದ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡರು.

ಕಮಲ್­ನಾಥ್ ಅವರ ಸೋದರ ಅಳಿಯ ಅಗಸ್ಟಾ ವೆಸ್ಟ್ಲ್ಯಾಂಡ್ ಪ್ರಕರಣದಲ್ಲಿ ಇತ್ತೀಚೆಗಷ್ಟೆ ಬಂಧನಕ್ಕೊಳಗಾಗಿದ್ದಾರೆ. ಅವರ ಬೆನ್ನೆಲ್ಲೆ ಕಮಲ್­ನಾಥ್ ಅವರಿಗೂ ಸಂಕಷ್ಟ ಎದುರಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top