ಶ್ರೀನಗರ: ಜಮ್ಮು ಕಾಶ್ಮೀರದ ಗಡಿಯೊಳಗೆ ನುಗ್ಗಿರುವ ಉಗ್ರರು ಆ ಭಾಗದ ಯುವಕರನ್ನು ಭಯೋತ್ಪಾದನೆಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ತರಬೇತಿಗಳನ್ನೂ ನೀಡುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಲಷ್ಕರ್ ಇ ತೋಯ್ಬಾ, ಜೈಶೇ ಇ ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರು ಕಾಶ್ಮೀರದ ಯುವಕರನ್ನು ತಮ್ಮತ್ತ ಸೆಳೆಯುತ್ತಿದ್ದಾರೆ. ಅವರಿಗೆ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದನ ತರಬೇತಿಗಳನ್ನು ನೀಡಿ ಭಾರತದ ವಿರುದ್ಧ ಛೂ ಬಿಡಲು ಪ್ರಯತ್ನಿಸುತ್ತಿದ್ದಾರೆ.
ಪಾಕಿಸ್ಥಾನದ ಇಸ್ಲಾಮಾಬಾದ್, ಪಂಜಾಬ್, ಮುಲ್ತಾನ್, ಕ್ವೆಟ್ಟಾ ಮುಂತಾದ ಕಡೆಯೂ ಈ ಸಂಘಟನೆಗಳು ಭಯೋತ್ಪಾದನ ತರಬೇತಿ ಕೇಂದ್ರಗಳನ್ನು ಹೊಂದಿದೆ.
ಈ ಸಂಘಟನೆಗಳು ಈಗಾಗಲೇ ಭಾರತ, ಪಾಕಿಸ್ಥಾನ, ಅಮೆರಿಕಾಗಳಲ್ಲಿ ನಿಷೇಧಕ್ಕೆ ಒಳಗಾಗಿದೆ. ಆದರೆ ಜಮಾತ್ ಉದ್ ದಾವಾ ಎಂಬ ಸಂಘಟನೆ ಹೆಸರಿನಲ್ಲಿ ಇವರು ಹಣವನ್ನು ಸಂಗ್ರಹಿಸಿ ಅದನ್ನು ತಮ್ಮ ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಭಯೋತ್ಪಾದಕರ ಒಳನುಸುಳುವಿಕೆಯನ್ನು ಅಪಾರ ಪ್ರಮಾಣದಲ್ಲಿ ನಮ್ಮ ಸೈನಿಕರು ತಡೆಗಟ್ಟಿದರೂ ಕೆಲವೊಂದು ಉಗ್ರರು ಈಗಾಗಲೇ ಗಡಿಯೊಳಗೆ ಪ್ರವೇಶಿಸಿದ್ದಾರೆ. ಅವರು ದೇಶಕ್ಕೆ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಇದೆ. ಹೀಗಾಗಿ ಸೇನಾ ಪಡೆಗಳನ್ನು ರೆಡ್ ಅಲರ್ಟ್ನಲ್ಲಿ ಇಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.