ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಜರುಗಿದ ‘ಓಝೋನ್ ಡೇ 2019’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ್ ವೈಪರೀತ್ಯ ರಾಜ್ಯ ಖಾತೆ ಸಚಿವ ಬಾಬುಲ್ ಸುಪ್ರಿಯೋ ಅವರು, ಓಝೋನ್ ಪದರದ ಸಂರಕ್ಷಣೆಯ ಅಗತ್ಯತೆಯ ಬಗ್ಗೆ ಜಗತ್ತಿನ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ಈ ಓಝೋನ್ ದಿನವು ಮಹತ್ವದ್ದಾಗಿದೆ ಎಂದಿದ್ದಾರೆ.
ವಿಶ್ವ ಓಝೋನ್ ದಿನಾಚರಣೆಯಲ್ಲಿ ಯುಎನ್ ಪರಿಸರ, ಯುಎನ್ಡಿಪಿ, ಜಿಐಝಡ್ ಸೇರಿದಂತೆ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಸರ್ಕಾರಿ ಇಲಾಖೆಗಳು, ಕೈಗಾರಿಕೆ ಮತ್ತು ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಮತ್ತು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಸತಿ ಮತ್ತು ವಾಣಿಜ್ಯ ಕಟ್ಟಡಗಳು, ಕೋಲ್ಡ್-ಚೈನ್, ರಿಫ್ರಿಜರೇಶನ್, ಸಾರಿಗೆ ಮತ್ತು ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಕೂಲಿಂಗ್ ಅಗತ್ಯತೆಯನ್ನು ಪ್ರತಿಪಾದಿಸಿದ ದೂರದೃಷ್ಟಿತ್ವವುಳ್ಳ 2019 ರ ಮಾರ್ಚ್ನಲ್ಲಿ ತರಲಾದ ಸಮಗ್ರ ಕೂಲಿಂಗ್ ಕ್ರಿಯಾ ಯೋಜನೆಯನ್ನು ಪ್ರಾರಂಭಿಸಿದ ವಿಶ್ವದ ಮೊದಲ ರಾಷ್ಟ್ರಗಳಲ್ಲಿ ಭಾರತ ಒಂದಾಗಿದೆ ಎಂಬ ಅಂಶವನ್ನು ಸಚಿವರು ಉಲ್ಲೇಖ ಮಾಡಿದ್ದಾರೆ. ಇದು ನೇರ ಮತ್ತು ಪರೋಕ್ಷ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತಿದೆ ಎಂದಿದ್ದಾರೆ.
ಭಾರತದ ನ್ಯಾಷನಲ್ ಆ್ಯಕ್ಷನ್ ಕೂಲಿಂಗ್ ಪ್ಲ್ಯಾನ್ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟ್ರೆಸ್ ಅವರ ಮನ್ನಣೆಯನ್ನು ಗಳಿಸಿದೆ ಎಂದ ಅವರು, ಭಾರತ ಕೈಗೊಂಡ ಒಂದು ಹೆಜ್ಜೆ ಈ ಮಹತ್ವದ ನೀತಿ ಉಪಕ್ರಮವನ್ನು ಜಾಗತಿಕವಾಗಿ ಗುರುತಿಸಲು ಕಾರಣವಾಗಿದೆ, ಇದು ಹವಾಮಾನ ಕ್ರಮ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಸಹಾಯ ಮಾಡುತ್ತದೆ ಎಂದಿದ್ದಾರೆ.
The 25th World #OzoneDay themed: “32 Years & Healing” was celebrated by @moefcc today. Where I also released the following publications👇:
1. The #MontrealProtocol
India’s Success Story. (1/3)
@PrakashJavdekar @India4Land @UNCCD @UNinIndia pic.twitter.com/iXagFy3MsB— Babul Supriyo (@SuPriyoBabul) September 16, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.