ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ 30 ತಿಂಗಳುಗಳು ಪೂರೈಸಿದೆ. ಈ ಹಿನ್ನಲೆಯಲ್ಲಿ ಆ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸಲಾಗಿದೆ.
2017ರಲ್ಲಿ ಈ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವವಾದ ಜಯವನ್ನು ಗಳಿಸಿತ್ತು. ಬಳಿಕ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಯಿತು. 2017ರ ಮಾರ್ಚ್ 19ರಂದು ಉತ್ತರಪ್ರದೇಶದ 22ನೇ ಮುಖ್ಯಮಂತ್ರಿಯಾಗಿ ಇವರು ಪ್ರಮಾಣವಚನವನ್ನು ಸ್ವೀಕಾರ ಮಾಡಿದರು.
ಸರ್ಕಾರದ ಸಾಧನೆಯ ಬಗ್ಗೆ ವಿವರಿಸಿರುವ ಮಾಹಿತಿ ಮುಖ್ಯ ಕಾರ್ಯದರ್ಶಿ ಅವನೀಶ್ ಆವಸ್ಥಿ ಅವರು, “ರಾಜ್ಯ ಸರ್ಕಾರವು ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಸೌಭಾಗ್ಯ ಯೋಜನೆ, ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಸ್ವಚ್ಛ ಭಾರತ್ ಅಭಿಯಾನ ಅಥವಾ ಶೌಚಾಲಯಗಳ ನಿರ್ಮಾಣ ಹೀಗೆ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ದಾಖಲೆ ಬರೆಯಲಾಗಿದೆ. ಹೀಗಾಗಿ ಈ ವಿಶೇಷ ಸಂದರ್ಭದಲ್ಲಿ ಸಂಭ್ರಮಾಚರಣೆ ಬೇಕಾಗಿದೆ” ಎಂದಿದ್ದಾರೆ.
ಪೂರ್ವ ಉತ್ತರಪ್ರದೇಶದಲ್ಲಿ 2019 ರಲ್ಲಿ ಯೋಗಿ ಸರ್ಕಾರವು ಡೆಂಗ್ಯೂ, ಮಲೇರಿಯಾ ಮತ್ತು ಎನ್ಸೆಫಾಲಿಟಿಸ್ ನಂತಹ ಸಾಂಕ್ರಾಮಿಕ ರೋಗಗಳನ್ನು ಸುಮಾರು 65% ರಷ್ಟು ಪ್ರಮಾಣದಲ್ಲಿ ನಿಗ್ರಹಿಸುವಲ್ಲಿ ಯಶಸ್ವಿಯಾಗಿದೆ ಎಂದು ಅವಸ್ಥಿ ಹೇಳಿದ್ದಾರೆ.
ಯೋಗಿ ಸರ್ಕಾರ ತನ್ನ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಕಿರುಪುಸ್ತಕಗಳನ್ನು ಪ್ರಕಟಿಸಲು ಮತ್ತು ಕಿರುಚಿತ್ರಗಳನ್ನು ನಿರ್ಮಿಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಕಿರುಪುಸ್ತಕಗಳನ್ನು ಜನರಿಗೆ ವಿತರಿಸಲಾಗುವುದು ಮತ್ತು ಚಲನಚಿತ್ರಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಎಲ್ಇಡಿ ಪರದೆಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಅವಸ್ಥಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.