ನವದೆಹಲಿ: ರಾಷ್ಟ್ರದ ಏಕೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆಗಳನ್ನು ನೀಡುತ್ತಿರುವ ಸಂಸ್ಥೆಗಳಿಗೆ ಅಥವಾ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರವು ಸರ್ದಾರ್ ವಲ್ಲಭಾಬಾಯ್ ಪಟೇಲ್ ಅವರ ಹೆಸರಿನಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಇದೀಗ ಕೇಂದ್ರ ಗೃಹಸಚಿವಾಲಯ ಶುಕ್ರವಾರ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದೆ.
ಭಾರತದ ಏಕತೆ ಮತ್ತು ಸಮಗ್ರತೆಯ ಉದ್ದೇಶಗಳಿಗಾಗಿ ಕೊಡುಗೆಗಳನ್ನು ನೀಡುತ್ತಿರುವ ಸಂಸ್ಥೆ ಅಥವಾ ವ್ಯಕ್ತಿಗಳಿಗೆ ಸರ್ದಾರ್ ಪಟೇಲ್ ರಾಷ್ಟ್ರೀಯ ಏಕತಾ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಗೃಹಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
“ಧರ್ಮ, ಜನಾಂಗ, ಜಾತಿ, ಲಿಂಗ, ಜನ್ಮಸ್ಥಳ, ವಯಸ್ಸು, ವೃತ್ತಿಯ ಬೇಧವಿಲ್ಲದೆ ಎಲ್ಲಾ ಭಾರತೀಯ ನಾಗರಿಕರು ಮತ್ತು ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಹರಾಗಿದ್ದಾರೆ” ಎಂದು ಸಚಿವಾಲಯ ಹೇಳಿದೆ.
ಪ್ರಶಸ್ತಿಗೆ ಆಯ್ಕೆ ಮಾಡಲಾದ ವ್ಯಕ್ತಿ ಅಥವಾ ಸಂಸ್ಥೆಗಳ ಹೆಸರುಗಳನ್ನು ಭಾರತ ಗೆಜೆಟ್ನಲ್ಲಿ ಪ್ರಕಟಿಸಲಾಗುವುದು ಮತ್ತು ಅಂತಹ ಎಲ್ಲಾ ಸ್ವೀಕೃತ ನೋಂದಣಿಯನ್ನು ರಾಷ್ಟ್ರಪತಿಗಳ ನಿರ್ದೇಶನದಲ್ಲಿ ನಿರ್ವಹಿಸಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಕಳೆದ ಡಿಸೆಂಬರ್ನಲ್ಲಿ ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ಸರ್ದಾರ್ ಪಟೇಲ್ ಅವರ ದೈತ್ಯ ಪ್ರತಿಮೆಯ ಬಳಿ ನಡೆದ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ಗಳ ವಾರ್ಷಿಕ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿಯ ಬಗ್ಗೆ ಘೋಷಣೆ ಮಾಡಿದ್ದರು.
“ಸರ್ದಾರ್ ಪಟೇಲ್ ಭಾರತವನ್ನು ಏಕೀಕರಿಸುವ ಸಲುವಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ರಾಷ್ಟ್ರೀಯ ಏಕೀಕರಣಕ್ಕಾಗಿ ಸರ್ದಾರ್ ಪಟೇಲ್ ಪ್ರಶಸ್ತಿ ಅವರಿಗೆ ಸೂಕ್ತವಾದ ಗೌರವವಾಗಿದೆ ಮತ್ತು ಭಾರತದ ಏಕತೆ ಮತ್ತು ರಾಷ್ಟ್ರೀಯ ಏಕೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಹೆಚ್ಚಿನ ಪ್ರೇರಣೆಯನ್ನು ಇದು ಜನರಿಗೆ ನೀಡುತ್ತದೆ ”ಎಂದು ಪ್ರಧಾನಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.