ನಾಗ್ಪುರ: ಸುಮಾರು 30 ದೇಶಗಳ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂವಾದವನ್ನು ನಡೆಸಿದರು. ಆರ್ಎಸ್ಎಸ್ ಕಾರ್ಯವೈಖರಿಯ ಬಗ್ಗೆ ಮುಕ್ತ ಚರ್ಚೆಯನ್ನು ಈ ಸಂವಾದ ಕಾರ್ಯದಲ್ಲಿ ನಡೆಸಲಾಯಿತು.
ಸಂವಾದದಲ್ಲಿ ಸುಮಾರು 80 ಪತ್ರಕರ್ತರು ಭಾಗವಹಿಸಿದ್ದರು. ಸುಮಾರು ಎರಡೂವರೆ ಗಂಟೆಗಳ ಕಾಲ ಸಂವಾದ ಜರುಗಿದೆ. ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಮಾಲೋಚನೆ ನಡೆಸುವ ಸಂಘದ ಕಾರ್ಯಕ್ರಮದ ಭಾಗವಾಗಿ ಈ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಸಂವಾದದಲ್ಲಿ, ಭಾಗವತ್ ಅವರು ವಿದೇಶಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂಘದ ದೂರದೃಷ್ಟಿ ಚಿಂತನೆಗಳನ್ನು ಹಂಚಿಕೊಂಡರು. ಪ್ರಶ್ನೋತ್ತರ ಅವಧಿಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.
ಭಾಗವತ್ ಅವರಲ್ಲದೆ, RSS ಮುಖಂಡರಾದ ಮನಮೋಹನ್ ವೈದ್ಯ, ಕೃಷ್ಣ ಗೋಪಾಲ್ ಮತ್ತು ಭಜ್ರಾನ್ ಲಾಲ್ ಗುಪ್ತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
1925ರ ಸೆ.27ರಂದು ನಾಗ್ಪುರದಲ್ಲಿ ಕೇಶವ ಬಲಿರಾಮ್ ಹೆಡ್ಗೆವಾರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಸ್ಥಾಪನೆ ಮಾಡಿದರು. ಹಿಂದೂ ಸಮುದಾಯದ ಸಂಘಟನೆ ಮತ್ತು ದೇಶ ಸೇವೆಯ ಪ್ರಮುಖ ಉದ್ದೇಶವನ್ನು ಇಟ್ಟುಕೊಂಡು ಸ್ಥಾಪನೆ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.