ನವದೆಹಲಿ: ಆರೋಗ್ಯ ಮತ್ತು ಪರಿಸರಕ್ಕೆ ಉಂಟಾಗುವ ಅಪಾಯವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಡುಗೆ ತೈಲವನ್ನು ಮರುಬಳಕೆ ಮಾಡಿ ಬಯೋಡೀಸಲ್ ಆಗಿ ಪರಿವರ್ತಿಸುವ ಬಗ್ಗೆ ಜಾಗೃತಿಯನ್ನು ಮೂಡಿಸಲು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಮುಂದಾಗಿದೆ. ಈ ಕಾರ್ಯವನ್ನು ದೊಡ್ಡ ಮಟ್ಟದಲ್ಲಿ ಸಾಧ್ಯವಾಗಿಸಲು ಕೇಂದ್ರ ಸರಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಿದೆ.
ಇಂತಹ ಕಾರ್ಯಕ್ರಮಗಳ ಭಾಗವಾಗಿ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ಬಳಕೆ ಮಾಡಿದ ಅಡುಗೆ ಎಣ್ಣೆಗಳನ್ನು ಬಯೋಡೀಸಲ್ ಆಗಿ ಪರಿವರ್ತಿಸುವ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ.
ಸಚಿವಾಲಯದ ಕಾರ್ಯದರ್ಶಿ ಡಾ. ಎಂಎಂ ಕುಟ್ಟಿ ಅವರು, ದೆಹಲಿಯಲ್ಲಿ ಬುಧವಾರ ಪ್ರಚಾರ ವಾಹನಕ್ಕೆ ಚಾಲನೆಯನ್ನು ನೀಡಿದರು.
ತೈಲ ಮಾರುಕಟ್ಟೆ ಕಂಪನಿಗಳು ಬಳಸಿದ ಅಡುಗೆ ಎಣ್ಣೆಗಳನ್ನು ಬಯೋಡೀಸಲ್ ಆಗಿ ಪರಿವರ್ತಿಸುವ ಮೂಲಕ ಭಾರತವನ್ನು ಶುದ್ಧಗೊಳಿಸುವ ಅಭಿಯಾನಕ್ಕೆ ದೊಡ್ಡಮಟ್ಟದ ಪ್ರಚಾರವನ್ನು ನೀಡಲು ಮುಂದಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅರಿವು ಮೂಡಿಸುವ ಅಭಿಯಾನ, ಬಳಕೆ ಮಾಡಿದ ಅಡುಗೆ ಎಣ್ಣೆಗಳ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವನ್ನು ಮೂಡಿಸುವುದು ಮತ್ತು ಬಳಸಿದ ಎಣ್ಣೆಯನ್ನು ಬಯೋಡೀಸಲ್ ಪರಿವರ್ತಿಸುವ ಬಗ್ಗೆ ಮಾಹಿತಿಯನ್ನು ನೀಡುವುದು ಮುಂತಾದವುಗಳು ಪ್ರಚಾರದ ಭಾಗವಾಗಿವೆ.
ಪ್ರಚಾರ ವಾಹನಗಳು ದೇಶದ 100 ನಗರಗಳನ್ನು ಸುತ್ತಲಿವೆ. ಇವುಗಳಲ್ಲಿ ಪೋಸ್ಟರ್ ಸಂದೇಶಗಳಿದ್ದು, ಬಳಸಿದ ಅಡುಗೆ ಎಣ್ಣೆಯನ್ನು ಬಯೋಡೀಸಲ್ ಆಗಿ ಪರಿವರ್ತಿಸುವ ಬಗ್ಗೆ ಮಾಹಿತಿಯನ್ನು ನೀಡಲಿದೆ. ಈ ಪ್ರಚಾರಕಾರ್ಯವನ್ನು ನಿರಂತರ ಪ್ರಕ್ರಿಯೆಗೊಳಿಸಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.