News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಂಬೈ ಚರ್ಚ್‌ಗೇಟ್ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಮರುಬಳಕೆಯಿಂದ ತಯಾರಿಸಿದ ಪರಿಸರ ಸ್ನೇಹಿ ಬೆಂಚ್

ಮುಂಬಯಿ: ಪರಿಸರ ಸ್ನೇಹಿಯಾಗುವ ನಿಟ್ಟಿನಲ್ಲಿ ಭಾರತೀಯ ರೈಲ್ವೆಯು ಮಹತ್ವದ ಹೆಜ್ಜೆಯಿಟ್ಟಿದೆ. ಮುಂಬೈಯ ಚರ್ಚ್ ಗೇಟ್ ರೈಲ್ವೆ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಮರು ಬಳಕೆಯಿಂದ ನಿರ್ಮಾಣ ಮಾಡಿದಂತಹ 3 ಬೆಂಚ್‌ಗಳನ್ನು ಸ್ಥಾಪನೆ ಮಾಡಿದೆ.

ಈ ಬೆಂಚು ಅತ್ಯಂತ ಬಲಿಷ್ಠವಾಗಿದೆ ಮತ್ತು ಭಾರವೂ ಇದೆ. ಪರಿಸರಕ್ಕೆ ಇದು ಯಾವುದೇ ರೀತಿಯಲ್ಲಿ ಹಾನಿಯನ್ನು ಮಾಡುವುದಿಲ್ಲ ಎಂದು ರೈಲ್ವೆ ಸಚಿವಾಲಯವು ಟ್ವಿಟ್‌ನಲ್ಲಿ ಹೇಳಿದೆ.

ಈ ಮಹತ್ವದ ಕ್ರಮದ ಮೂಲಕ ರೈಲ್ವೆಯು ಭಾರತ ಸರಕಾರದ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಕೈ ಜೋಡಿಸಿದೆ.

ಈ ವರ್ಷದ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಕ ಬಳಕೆ ಪ್ಲಾಸ್ಟಿಕ್ ಬಳಸುವುದನ್ನು ನಿಲ್ಲಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯವು ನೀರಿನ ಪ್ಲಾಸ್ಟಿಕ್ ಬಾಟಲಿಯನ್ನು ನಾಶಪಡಿಸುವ ಅಂತಹ ಯಂತ್ರಗಳನ್ನು ಹಲವಾರು ನಿಲ್ದಾಣಗಳಲ್ಲಿ ಸ್ಥಾಪನೆ ಮಾಡಿದೆ. ಇದೀಗ ಮರುಬಳಕೆ ಪ್ಲಾಸ್ಟಿಕ್ ಅನ್ನು ಬಳಸಿ ಬೆಂಚ್ ತಯಾರಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top