ನವದೆಹಲಿ: ಪಾಕಿಸ್ಥಾನವು ಡ್ರೋನ್ಗಳ ಮೂಲಕ ಬೃಹತ್ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸಂವಹನ ಯಂತ್ರಗಳನ್ನು ಭಾರತದ ಗಡಿ ಪ್ರದೇಶಕ್ಕೆ ಪೂರೈಸುತ್ತಿದೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಇತ್ತೀಚಿಗೆ ಪಂಜಾಬ್ ಗಡಿಯಲ್ಲಿ ಪತ್ತೆಯಾದ ಡ್ರೋನ್ ಮತ್ತು ಶಸ್ತ್ರಾಸ್ತ್ರಗಳೇ ಇದಕ್ಕೆ ಸಾಕ್ಷಿಯಾಗಿವೆ. ಇದೀಗ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳಕ್ಕೆ ಆದೇಶಿಸಿದೆ.
ಅಧಿಕಾರಿಗಳ ಪ್ರಕಾರ, ತನಿಖಾ ಸಂಸ್ಥೆಯು ಶೀಘ್ರದಲ್ಲೇ ಈ ನಿಟ್ಟಿನ ಪ್ರಕರಣವನ್ನು ದಾಖಲಿಸಿಕೊಳ್ಳುವ ಸಾಧ್ಯತೆಯಿದೆ.
ಕಳೆದ ತಿಂಗಳು ಪಾಕಿಸ್ಥಾನ ಮತ್ತು ಜರ್ಮನಿ ಮೂಲದ ಭಯೋತ್ಪಾದಕ ಗುಂಪಿನ ಬೆಂಬಲವನ್ನು ಹೊಂದಿದ್ದ ಖಲಿಸ್ತಾನ್ ಜಿಂದಾಬಾದ್ ಫೋರ್ಸ್ (ಕೆಜೆಡ್ಎಫ್)ನ ಭಯೋತ್ಪಾದಕ ಘಟಕವನ್ನು ಪಂಜಾಬ್ ಪೊಲೀಸರು ಭೇದಿಸಿದ್ದಾರೆ. ಈ ಬೆಳವಣಿಗೆ ಬಳಿಕ ಅಲ್ಲಿನ ಸರ್ಕಾರವು ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸುವಂತೆ ಕೇಂದ್ರಕ್ಕೆ ಮನವಿ ಮಡಿಕೊಂಡಿತ್ತು.
ಪಂಜಾಬ್ ಮತ್ತು ಅಕ್ಕ ಪಕ್ಕದ ರಾಜ್ಯಗಳಲ್ಲಿ ಭಯೋತ್ಪಾದಕ ಗುಂಪು ಸರಣಿ ಸ್ಪೋಟಗಳನ್ನು ನಡೆಸಲು ಭಯೋತ್ಪಾದಕ ಗುಂಪು ಸಂಚು ರೂಪಿಸುತ್ತಿದೆ ಎಂದು ಪಂಜಾಬ್ ಪೊಲೀಸರು ಹೇಳಿಕೊಂಡಿದ್ದಾರೆ.
ಪಾಕಿಸ್ಥಾನದಿಂದ ಶಸ್ತ್ರಾಸ್ತ್ರ ಮತ್ತು ಸಂವಹನ ಯಂತ್ರಗಳನ್ನು ಭಾರತಕ್ಕೆ ತಲುಪಿಸಲು ಡ್ರೋನ್ಗಳನ್ನು ಬಳಸಲಾಗಿದೆ ಎಂದು ಪಂಜಾಬ್ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸೆಪ್ಟೆಂಬರ್ 22 ರಂದು ಪಂಜಾಬ್ನ ತಾರ್ನ್ ತರಣ್ ಜಿಲ್ಲೆಯ ಚೋಹ್ಲಾ ಸಾಹಿಬ್ ಗ್ರಾಮದ ಹೊರವಲಯದಲ್ಲಿ ನಾಲ್ಕು ಜನ ಶಂಕಿತರನ್ನು ಬಂಧಿಸಲಾಗಿದೆ. ಅವರಿಂದ ಐದು ಎಕೆ -47 ರೈಫಲ್ಗಳು, ಪಿಸ್ತೂಲ್ಗಳು, ಸ್ಯಾಟಲೈಟ್ ಫೋನ್ಗಳು ಮತ್ತು ಹ್ಯಾಂಡ್ ಗ್ರೆನೇಡ್ಗಳು ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್ಐ ಜಿಹಾದಿ ಮತ್ತು ಖಲಿಸ್ತಾನ್ ಪರ ಭಯೋತ್ಪಾದಕ ಸಂಘಟನೆಗಳಿಗಾಗಿ ಈ ಶಸ್ತ್ರಾಸ್ತ್ರಗಳನ್ನು ಗಡಿಯ ಮೂಲಕ ತಲುಪಿಸುತ್ತಿದೆ ಎಂದು ಪಂಜಾಬ್ ಪೊಲೀಸರು ಶಂಕಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.