ಮುಂಬಯಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಶಿವಸೇನೆಗಳು ಜಂಟಿಯಾಗಿ ಕಣಕ್ಕಿಳಿಯುತ್ತಿವೆ. ಉಭಯ ಪಕ್ಷಗಳ ನಡುವೆ ಕಂಟಕವಾಗಿದ್ದ ಸೀಟು ಹಂಚಿಕೆ ಬಿಕ್ಕಟ್ಟು ಕೊನೆಗೂ ಸುಸೂತ್ರವಾಗಿ ನೆರವೇರಿದ್ದು, ಬಿಜೆಪಿ ತನ್ನ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಬಿಜೆಪಿ 164 ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ, ಶಿವಸೇನೆಯು 124 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಒಟ್ಟು 288 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ – ನ್ಯಾಷನಲಿಸ್ಟ್ ಕಾಂಗ್ರೆಸ್ ಮೈತ್ರಿ ಮತ್ತು ಬಿಜೆಪಿ-ಶಿವಸೇನಾ ಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ.
50-50 ಸೀಟು ಹಂಚಿಕೆಗೆ ಶಿವಸೇನೆ ಬೇಡಿಕೆಯಿಟ್ಟಿತ್ತು, ಆದರೆ ಬಳಿಕ ಮಾತುಕತೆಯನ್ನು ನಡೆಸಿ ಅಂತಿಮವಾಗಿ ಸೀಟು ಹಂಚಿಕೆಯನ್ನು ಕೊನೆಗೊಳಿಸಲಾಗಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರು ಕಣಕ್ಕಿಳಿಯುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಗ್ಪುರ ನೈರುತ್ಯದಿಂದ ಕಣಕ್ಕಿಳಿಯುತ್ತಿದ್ದಾರೆ.
ಅಕ್ಟೋಬರ್ 21 ರಂದು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ಕ್ಕೆ ಫಲಿತಾಂಶ ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.