ನವದೆಹಲಿ: ದೇಶದ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಗುಜರಾತಿನ ಏಕತಾ ಪ್ರತಿಮೆಗೆ ಭೇಟಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರ ಈ ಭೇಟಿಗೆ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
“ನಮ್ಮ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ಏಕತಾ ಪ್ರತಿಮೆಗೆ ಭೇಟಿ ನೀಡಿರುವುದನ್ನು ನೋಡಿ ಸಂತೋಷವಾಗುತ್ತಿದೆ” ಎಂದಿದ್ದಾರೆ.
Happy to see our former PM Shri @H_D_Devegowda Ji visit the ‘Statue of Unity.’ https://t.co/GVWMo7UIow
— Narendra Modi (@narendramodi) October 6, 2019
ಗುಜರಾತಿನ ಕಾವಡಿಯದಲ್ಲಿ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ದೇಶದ ಅತಿ ಎತ್ತರದ 180 ಮೀಟರ್ ಎತ್ತರದ ಪ್ರತಿಮೆಗೆ ಏಕತಾ ಪ್ರತಿಮೆ ಎಂದು ಕರೆಯಲಾಗುತ್ತದೆ. ದೇವೇಗೌಡರು ಈ ಪ್ರತಿಮೆಗೆ ಶನಿವಾರ ಭೇಟಿ ನೀಡಿದ್ದರು.
ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಸಿಎಂ ಆಗಿದ್ದ ಸಮಯದಲ್ಲಿ ಏಕತಾ ಪ್ರತಿಮೆಯ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಾಗಿತ್ತು. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಮೋದಿಯವರು ಈ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು.
ದೇಶದ ಏಕೀಕರಣದ ರುವಾರಿ ಎಂದೇ ಪರಿಗಣಿಸಲ್ಪಟ್ಟಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಪಟೇಲ್ ಅವರಿಗೆ ಈ ಪ್ರತಿಮೆ ಅತಿ ದೊಡ್ಡ ಗೌರವವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.